ಮುಖ್ಯ ಮಂತ್ರಿ ಕುಮಾರ ಸ್ವಾಮಿ 
ರಾಜಕೀಯ

ಖಾಸಗಿ ವಿಮಾನಕ್ಕೆ ಬ್ರೇಕ್, ಸ್ವಂತ ಹಣದಲ್ಲೇ ಇಂಧನ: ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ ಸಿಎಂ ಕ್ರಮ

: ಅನಗತ್ಯ ಸಿಬ್ಬಂದಿ, ಕಚೇರಿಗಳ ನವೀಕರಣ ಸೇರದಂತೆ ಹಲವು ಅನುಪಯುಕ್ತ ವೆಚ್ಚಗಳಿಗೆ ಕಡಿವಾಣ ಹಾಕುವಂತೆ ಕುಮಾರ ಸ್ವಾಮಿ ಆದೇಶ ನೀಡಿದ ...

ಬೆಂಗಳೂರು: ಅನಗತ್ಯ ಸಿಬ್ಬಂದಿ, ಕಚೇರಿಗಳ ನವೀಕರಣ ಸೇರದಂತೆ ಹಲವು ಅನುಪಯುಕ್ತ ವೆಚ್ಚಗಳಿಗೆ ಕಡಿವಾಣ ಹಾಕುವಂತೆ  ಕುಮಾರ ಸ್ವಾಮಿ ಆದೇಶ ನೀಡಿದ ಬೆನ್ನಲ್ಲೇ ತಾವು ಖಾಸಗಿ ವಿಮಾನಗಳಲ್ಲಿ ಪ್ರಯಾಣಿಸುವುದಿಲ್ಲ ಎಂದು ಹೇಳಿ ಸಾರ್ವಜನಿಕರ ಹಣ ಪೋಲಾಗುವುದನ್ನು ತಪ್ಪಿಸಲು ಸಿಎಂ ಮುಂದಾಗಿದ್ದಾರೆ.
ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ ಮಾತನಾಡಿದ ಕುಮಾರ ಸ್ವಾಮಿ, ಮೇ 17 ರಿಂದ ಮೇ 20 ರವರೆಗೆ ಸಿಎಂ ಆಗಿದ್ದ ಯಡಿಯೂರಪ್ಪನವರು ಮೂರು ದಿನಗಳಲ್ಲಿ 13 ಲಕ್ಷ ಪ್ರಯಾಣ ವೆಚ್ಚ ಮಾಡಿದ್ದಾರೆ ಎಂದು ಟೀಕಿಸಿದರು.
ಒಂದನೇ ತರಗತಿಯಿಂದ ಪದವಿಯವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಉದ್ಧೇಶವಿದೆ ಎಂದು ಹೇಳಿದ್ದಾರೆ. ನಾನು ಅದೃಷ್ಟದಿಂದ ಸಿಎಂ ಆಗಿದ್ದೇನೆ, ಕಾಂಗ್ರೆಸ್ ಬೆಂಬಲದಿಂದಾಗಿ ನಾನು ಸಿಎಂ ಆಗಿದ್ದೇನೆ, ನನಗೆ ಗೊತ್ತಿಲ್ಲ ಅವರು ಎಲ್ಲಿಯವರೆಗೂ ಬೆಂಬಲ ನೀಡುತ್ತಾರೋ ಅಲ್ಲಿಯವರೆಗೂ ಮಾತ್ರ ನಾನು ಮುಖ್ಯಮಂತ್ರಿ, ಅಲ್ಲಿಯವರೆಗೂ ನಾನು ಸಿಎಂ ಆಗಿ ಸರಿಯಾದದದ್ದನ್ನೇ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ,ರೈತರ ಸಾಲ ಮನ್ನಾ ಮಾಡಲು ಬಳಸುವುದಾಗಿ ತಿಳಿಸಿದ್ದಾರೆ, ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆ ಹಣ ನ್ಯಾಯಯುತಕವಾಗಿ ಬಳಕೆಯಾಗಬೇಕು, ಹೀಗಾಗಿ ನಾನು ಖಾಸಗಿ ವಿಮಾನಗಳಲ್ಲಿ ಪ್ರಯಾಣಿಸಲು ಜನರ ಹಣವನ್ನು ದುರುಪಯೋಗ ಪಡಿಸಿಕೊಳ್ಳುವುದಿಲ್ಲ, ಸರ್ಕಾರಿ ಕಾರುಗಳನ್ನು ನಾನು ಬಳಸುವಾಗ ನನ್ನದೇ ಹಣದಿಂದ ಇಂಧನ ತುಂಬಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ತೆರಿಗೆಯ ಪ್ರತಿಯೊಂದು ಪೈಸೆ ಪರಿಣಾಮಕಾರಿಯಾಗಿ ಬಳಕೆಯಾಗಬೇಕು, ಸರ್ಕಾರದ ಆರ್ಥಿಕತೆಗೆ .ಯಾವುದೇ ತೊಂದರೆಯಾಗದಂತೆ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ..
ರಾಜ್ಯದ ಹಣಕಾಸು ವ್ಯವಸ್ಥೆಗೆ ಧಕ್ಕೆಯಾಗದಂತೆ ಚೌಕಟ್ಟಿನೊಳಗೆ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಕಾಲೇಜು ಶಿಕ್ಷಣ ಪಡೆದ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಸನ್ಮಾನ ಸಮಾರಂಭ ಹಮ್ಮಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT