ಡಿ ಕೆ ಶಿವಕುಮಾರ್, ಕೆ ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಯು ಟಿ ಖಾದರ್ 
ರಾಜಕೀಯ

ಭಿನ್ನಮತೀಯರ ಭಯದಿಂದ ಹಳೆ ಮುಖಗಳಿಗೆ ಮಣೆ ಹಾಕುತ್ತಿರುವ ಕಾಂಗ್ರೆಸ್ ಹೈಕಮಾಂಡ್

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ವಿರೋಧಿಗಳ ಭಯದ ನೆರಳಿನಲ್ಲಿ ಎರಡು ವಾರಗಳ ...

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ವಿರೋಧಿಗಳ ಭಯದ ನೆರಳಿನಲ್ಲಿ ಎರಡು ವಾರಗಳ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಚಿವ ಸಂಪುಟ ಬುಧವಾರ ರಚನೆಯಾಗುತ್ತಿದೆ.

ಸಚಿವ ಸಂಪುಟ ರಚನೆಯಲ್ಲಿ ಖಾತೆ ಹಂಚಿಕೆಯಲ್ಲಿ ಕೇಳಿಬಂದ ವಿರೋಧದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಳಬರನ್ನು ಬದಿಗೊತ್ತಿ ಹೊಸಬರಿಗೆ ಹೆಚ್ಚಿನ ಪ್ರಾತಿನಿಧಿತ್ವ ನೀಡುವ ತನ್ನ ಯೋಜನೆಯನ್ನು ಕೈಬಿಟ್ಟಿದೆ. ಇಂದಿನ ಸಚಿವ ಪಟ್ಟಿ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿನ ಸಚಿವಾಲಯಕ್ಕೆ ಹೆಚ್ಚು ಕಡಿಮೆ ಸಾಮ್ಯತೆಯಿದೆ. ಸಿದ್ದರಾಮಯ್ಯ ಸರ್ಕಾರದ ಸಂಪುಟದಲ್ಲಿದ್ದ ಹೆಚ್ ಕೆ ಪಾಟೀಲ್, ಆರ್ ವಿ ದೇಶಪಾಂಡೆ ಮತ್ತು ಆರ್ ರಾಮಲಿಂಗಾ ರೆಡ್ಡಿ ಅವರನ್ನು ಕೈಬಿಡಲಾಗಿದೆ.

ಅಲ್ಪಸಂಖ್ಯಾತ ಸಮುದಾಯದಿಂದ ರೋಶನ್ ಬೇಗ್, ಯು ಟಿ ಖಾದರ್ ಮತ್ತು ಕೆಜೆ ಜಾರ್ಜ್ ಅಲ್ಪಸಂಖ್ಯಾತ ಸಮುದಾಯಗಳನ್ನು ಪ್ರತಿನಿಧಿಸಲಿದ್ದಾರೆ. ನಿನ್ನೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರ ಖಾತೆ ಹಂಚಿಕೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳ ನಾಯಕರು ಸಾಕಷ್ಟು ಹರಸಾಹಸಪಟ್ಟಿದ್ದಾರೆ. ಹೀಗಾಗಿ ಎರಡೂ ಪಕ್ಷಗಳು ಕೆಲವು ಖಾತೆಗಳನ್ನು ಸದ್ಯದ ಮಟ್ಟಿಗೆ ಖಾಲಿಯಿಟ್ಟು ಮುಂದಿನ ದಿನಗಳಲ್ಲಿ ಭಿನ್ನಮತೀಯ ನಾಯಕರಿಗೆ ನೀಡಲು ಯೋಜನೆ ಹಾಕಿಕೊಂಡಿವೆ.

ಜೂನ್ 1 ರಂದು ಮಾಡಿಕೊಂಡ ಸಮ್ಮಿಶ್ರ ಸರ್ಕಾರದ ಒಪ್ಪಂದದ ಪ್ರಕಾರ, ಕಾಂಗ್ರೆಸ್ ಗೆ 22 ಸಚಿವ ಸ್ಥಾನ ಮತ್ತು ಜೆಡಿಎಸ್ ಗೆ 12 ಸಚಿವ ಹುದ್ದೆಗಳನ್ನು ನೀಡಲಾಗಿತ್ತು. ಆದರೂ ಇಂದು ಕಾಂಗ್ರೆಸ್ 17ರಿಂದ 18 ಮತ್ತು ಜೆಡಿಎಸ್ 8 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಿವೆ. ಇಂದು ಮಧ್ಯಾಹ್ನ 2.12ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವರುಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT