ಎಚ್.ಡಿ ಕುಮಾರ ಸ್ವಾಮಿ, ಜಿ, ಪರಮೇಶ್ವರ್ ಮತ್ತು ಡಿ.ಕೆ ಶಿವಕುಮಾಕ್ 
ರಾಜಕೀಯ

ಸಿಎಂ ಬಳಿ ಹಣಕಾಸು, ಡಿಸಿಎಂಗೆ ಗೃಹಖಾತೆ: ಡಿಕೆಶಿ ಹೆಗಲಿಗೆ ಜಲ ಸಂಪನ್ಮೂಲ?

ಗಜ ಪ್ರಸವದಂತಾಗಿದ್ದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಅಂತೂ ನೆರವೇರಿದೆ...

ಬೆಂಗಳೂರು: ಗಜ ಪ್ರಸವದಂತಾಗಿದ್ದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಅಂತೂ ನೆರವೇರಿದೆ, ಒಟ್ಟು 25 ಶಾಸಕರು ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಯಕರ ಚಿತ್ತ ಈಗ ಖಾತೆ ಹಂಚಿಕೆಯತ್ತ ತಿರುಗಿದೆ. 
ಯಾರಿಗೆ ಯಾವ ಖಾತೆ ಎಂಬುದರ ಬಗ್ಗೆ ಇಂದು ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆಯಿದೆ.  ಮೂಲಗಳ ಪ್ರಕಾರ ಈ ಮೊದಲು ಇಂಧನ ಖಾತೆ ತನ್ನ ಬಳಿಯೇ ಇಟ್ಟುಕೊಂಡಿದ್ದ ಜೆಡಿಎಸ್ ಅದನ್ನು ಬದಲಾಯಿಸಿಕೊಂಡು ಅದಕ್ಕೆ ಸರಿಸಮವಾದ ಖಾತೆ ಪಡೆದುಕೊಳ್ಳುವ ಸಾಧ್ಯತೆಯಿದೆ. ಹಾಗೇನಾದರೂ ಆದರೆ  ಇಂಧನ ಖಾತೆ ಒಕ್ಕಲಿಗರ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ಅವರಿಗೆ ಸಿಗಲಿದೆ ಎನ್ನಲಾಗುತ್ತಿದೆ.  ಒಂದು ವೇಳೆ ಹಾಗಾಗಿದಿದ್ದರೇ ಶಿವಕುಮಾರ್ ಗ ಜಲ ಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಖಾತೆ ದೊರೆಯಲಿದೆ ಎನ್ನಲಾಗುತ್ತಿದೆ. 
ಇನ್ನೂ ಗೃಹಖಾತೆಯನ್ನು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ತಮ್ಮ ಬಳಿಯೇ ಇರಿಸಿಕೊಳ್ಳಲಿದ್ದಾರೆ, ಮುಖ್ಯಮಂತ್ರಿ ಕುಮಾರ ಸ್ವಾಮಿ ಹಣಕಾಸು ಮತ್ತು ಅಬಕಾರಿ ಖಾತೆಗಳ ಹೊಣೆ ನಿರ್ಹಹಿಸಲಿದ್ದಾರೆ.
ಐಟಿ-ಬಿಟ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಗೆ ವಸತಿ ಜೊತೆಗೆ ಸಮಾಜ ಕಲ್ಯಾಣ ಇಲಾಖೆ, ಯುಟಿ ಖಾದರ್ ಗೆ ನಗರಾಭಿವೃದ್ಧಿ, ಕೆ.ಜೆ ಜಾರ್ಜ್ ಗೆ ಬೃಹತ್ ಕೈಗಾರಿಕೆ ಹಾಗೂ ಆರ್ .ವಿ ದೇಶಪಾಂಡೆಗೆ ಕಂದಾಯ ಖಾತೆ ವಹಿಸುವ ಸಾಧ್ಯತೆಗಳಿವೆ.
ಇನ್ನೂ ಸಂಪುಟದಲ್ಲಿರುವ ಏಕೈಕ ಮಹಿಳಾ ಸಚಿವೆ ಜಯಮಾಲಾ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಲಾಗುವುದು ಎಂದು ತಿಳಿದು ಬಂದಿದೆ. ಕಾಂಗ್ರೆಸ್ ನ ಜಮೀರ್ ಅಹಮದ್ ಖಾನ್ ಗೆ ಅಲ್ಫಸಂಖ್ಯಾತ ಕಲ್ಯಾಣ ಮತ್ತು ವಕ್ಫ್, ಎಚ್ ಡಿ ರೇವಣ್ಣಗೆ ಇಂಧನ ಮತ್ತು ಲೋಕೋಪಯೋಗಿ ಖಾತೆ, ಹಾಗೂ ಜ.ಟಿ ದೇವೇಗೌಡ ಅವರಿಗೆ ಸಹಕಾರ ಖಾತೆ ನೀಡಲಾಗುವುಗು ಎಂದು ನಿರೀಕ್ಷಿಸಲಾಗಿದೆ, ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಜವಾಬ್ದಾರಿ ನೀಡಲಾಗುವುದು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT