ಡಿ.ಕೆ ಸಹೋದರರೊಂದಿಗೆ ಶಾಸಕ ಎಚ್, ನಾಗೇಶ್ 
ರಾಜಕೀಯ

ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಪಕ್ಷೇತರ ಶಾಸಕ ನಾಗೇಶ್ ಆಕ್ರೋಶ; ತುಮಕೂರಿಗೆ ಬಂಪರ್

ರಾಣೆ ಬೆನ್ನೂರು ಶಾಸಕ ಆರ್. ಶಂಕರ್ ಗೆ ಸಚಿವ ಸ್ಥಾನ ಸಿಗುತ್ತದೆ ಎಂದಾದರೇ ನನಗೆ ಏಕಿಲ್ಲ, ಎಂದು ಮುಳಬಾಗಿಲು ಶಾಸಕ ನಾಗೇಂದ್ರ ...

ಕೋಲಾರ/ಬೆಂಗಳೂರು: ರಾಣೆ ಬೆನ್ನೂರು ಶಾಸಕ ಆರ್. ಶಂಕರ್ ಗೆ ಸಚಿವ ಸ್ಥಾನ ಸಿಗುತ್ತದೆ ಎಂದಾದರೇ ನನಗೆ ಏಕಿಲ್ಲ, ಎಂದು ಮುಳಬಾಗಿಲು ಶಾಸಕ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ದನಾಗಿದ್ದೆ, ಆದರೆ ನಂತರ ತಿಳಿಯಿತು ಸಚಿವರ ಪಟ್ಟಿಯಲ್ಲಿ ನನ್ನ ಹೆಸರಿಲ್ಲ ಎಂದು, ಇದರಿಂದ ನನಗೆ ತುಂಬಾ ಬೇಸರವಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ನಾನು ಗೆದ್ದ ನಂತರ ಡಿ.ಕೆ ಶಿವಕುಮಾರ್ ಮುಳಬಾಗಿಲಿಗೆ ಬಂದು ನನ್ನನ್ನು ಬೆಂಗಳೂರಿಗೆ ಕರೆ ತಂದರು, ಕಾಂಗ್ರೆಸ್ ನಾಯಕರು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ. ಕ್ಷೇತ್ರಕ್ಕೆ ತೆರಳಿ ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ತುಮಕೂರಿಗೆ ಬಂಪರ್
ಸಚಿವ ಸಂಪುಟ ವಿಸ್ತರಣೆಯಲ್ಲಿ ತುಮಕೂರು ಜಿಲ್ಲೆಗೆ ಬಂಪರ್ ಸಿಕ್ಕಿದೆ. ಕೊರಟಗೆರೆ ಶಾಸಕ ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿದ್ದಾರೆ. ಜೊತೆಗೆ ತುಮಕೂರು ಜಿಲ್ಲೆಯ ಕಾಂಗ್ರೆಸ್ ನ ವೆಂಕಟರಮಣಪ್ಪ ಮತ್ತು ಜೆಡಿಎಸ್ ನ ಗುಬ್ಬಿ ಶ್ರೀನಿವಾಸ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಳೆದ ಎರಡು ಮೂರು ದಶಕಗಳಿಂದ ತುಮಕೂರಿಗೆ ಎರಡು ಸ್ಥಾನ ಸಿಗುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT