ದಿನೇಶ್ ಗುಂಡೂರಾವ್,. ಈಶ್ವರ್ ಖಂಡ್ರೆ ಮತ್ತು ಎಂ ಕೃಷ್ಣಪ್ಪ 
ರಾಜಕೀಯ

ಕೆಪಿಸಿಸಿ ಹುದ್ದೆ ಒಕ್ಕಲಿಗರಿಗೋ, ಲಿಂಗಾಯತರಿಗೋ?: ರೇಸ್ ನಲ್ಲಿ ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ!

: 2019 ರ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹುದ್ದೆ ಅಧ್ಯಕ್ಷರ ನೇಮಕ ಕುರಿತಂತೆ ...

ಬೆಂಗಳೂರು: 2019 ರ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹುದ್ದೆ ಅಧ್ಯಕ್ಷರ ನೇಮಕ ಕುರಿತಂತೆ ಕಾಂಗ್ರೆಸ್ ಹೈ ಕಮಾಂಡ್ ಚಿಂತನೆ ನಡೆಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮುಂಚೂಣಿಯಲ್ಲಿದ್ದಾರೆ. ಪಕ್ಷ ಸಂಘಟನೆ ಚತುರತೆ ಹಾಗೂ ಕ್ಲೀನ್ ಇಮೇಜ್ ದಿನೇಶ್ ದೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ, ಪಕ್ಷದ ಹೈ ಕಮಾಂಡ್ ಗೆ ದಿನೇಶ್ ಕಾರ್ಯಶೈಲಿ ಮೆಚ್ಚುಗೆಯಾಗಿದೆ,  ಮಾಜಿ ಸಿಎಂ  ಗುಂಡೂರಾವ್ ಅವರ ಪುತ್ರನಾಗಿರುವ ದಿನೇಶ್ ಬಗ್ಗೆ ಪಕ್ಷದಲ್ಲಿ ಮೂಲ ಹಾಗೂ ವಲಸಿಗ ಕಾಂಗ್ರೆಸಿಗರೆಲ್ಲರ ವಿಶ್ವಾಸ ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ದೆಹಲಿಗೆ ತೆರಳಿದ್ದ ವೇಳೆ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ದಿನೇಶ್ ಜೊತೆ ಚರ್ಚಿಸಿದ್ದರು. ಖಾತೆ ಹಂಚಿಕೆ ಮುಗಿದ ನಂತರ ಹೈಕಮಾಂಡ್ ಕೆಪಿಸಿಸಿ ಹುದ್ದೆ ಆಯ್ಕೆ ಸಂಬಂಧ ಚರ್ಚಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ,
ಆದರೆ ಇಲ್ಲಿ ಜಾತಿ ಲೆಕ್ಕಾಚಾರ ಹೆಚ್ಚಿನ ಕೆಲಸ ಮಾಡುತ್ತದೆ. ದಿನೇಶ್ ಗುಂಡೂರಾವ್ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದರೆ ಇತ್ತೀಚೆಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಮತಗಳು ವಿಭಜನೆಯಾಗಿರುವ ಹಿನ್ನೆಲೆಯಲ್ಲಿ ಒಕ್ಕಲಿಗ ಅಥವಾ ಲಿಂಗಾಯತರಿಗೆ ಕೆಪಿಸಿಸಿ ಹುದ್ದೆ ನೀಡಲು ಹೈಕಮಾಂಡ್ ನಿರ್ಧರಿಸಲಿದೆ. ಲಿಂಗಾಯತ ಪ್ರಭಾವಿ ನಾಯಕ ಈಶ್ವರ್ ಖಂಡ್ರೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ, 
ಇವರ ಜೊತೆಗೆ ಮಾಜಿ ಸಚಿವ  ಹಾಗೂ ವಿಜಯನಗರದ ಒಕ್ಕಲಿಗ ಶಾಸಕ ಎಂ ಕೃಷ್ಣಪ್ಪ ಕೂಡ ಆಕಾಂಕ್ಷಿಯಾಗಿದ್ದಾರೆ,. ಜೊತೆಗೆ ಈಡಿಗ ಸಮುದಾಯದ ಬಿ.ಕೆ ಹರಿಪ್ರಸಾದ್ ಹೆಸರು ಕೂಡ ಕೇಳಿ ಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026 ಸೆಮಿಫೈನಲ್: ಸ್ಯಾಮ್ಸನ್ ಮಿಂಚಿನ ಅರ್ಧಶತಕ; ಇಂಗ್ಲೆಂಡ್ ಗೆ ಬೃಹತ್ 254 ರನ್ ಟಾರ್ಗೆಟ್ ನೀಡಿದ ಭಾರತ!

T20 World Cup Semi Final 2026: 19 ವರ್ಷಗಳ ಐತಿಹಾಸಿಕ ದಾಖಲೆ ಮುರಿದ ಸಂಜು-ಇಶಾನ್ ಕಿಶಾನ್! Video

T20 World Cup 2026: 2ನೇ ಸೆಮಿಫೈನಲ್; ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ದಿಢೀರ್ ರಾಜೀನಾಮೆ; ರವಿಗೆ ಹೆಚ್ಚುವರಿ ಜವಾಬ್ದಾರಿ

SCROLL FOR NEXT