ಬಂಡೆಪ್ಪ ಕಾಶೆಂಪುರ್ ಮತ್ತು ಜಿ,ಟಿ ದೇವೇಗೌಡ 
ರಾಜಕೀಯ

ಮುಗಿದಿಲ್ಲ ಖಾತೆ ಹಂಚಿಕೆ ಖ್ಯಾತೆ!: 'ಉನ್ನತ ಶಿಕ್ಷಣ' ಕ್ಕೆ ಬಂಡೆಪ್ಪ ನಿರಾಕರಣೆ, 'ಜಿಟಿಡಿ' ತೀರದ ಬವಣೆ

ಉನ್ನತ ಶಿಕ್ಷಣ ಖಾತೆಯನ್ನು ಶಾಸಕ ಜಿ.ಟಿ ದೇವೇಗೌಡ ನಿರಾಕರಿಸಿದ ನಂತರ ಮುಖ್ಯಮಂತ್ರಿ ಕುಮಾರ ಸ್ವಾಮಿ ಸಂಪುಟದಲ್ಲಿ ಯಾರು ಉನ್ನತ ಶಿಕ್ಷಣ ಸಚಿವ ಸ್ಥಾನ ..

ಬೆಂಗಳೂರು: ಉನ್ನತ ಶಿಕ್ಷಣ ಖಾತೆಯನ್ನು ಶಾಸಕ ಜಿ.ಟಿ ದೇವೇಗೌಡ ನಿರಾಕರಿಸಿದ ನಂತರ ಮುಖ್ಯಮಂತ್ರಿ ಕುಮಾರ ಸ್ವಾಮಿ ಸಂಪುಟದಲ್ಲಿ ಯಾರು ಉನ್ನತ ಶಿಕ್ಷಣ ಸಚಿವ ಸ್ಥಾನ ಪಡೆಯಲಿದ್ದಾರೆ ಎಂಬ ಬಗ್ಗೆ ಇನ್ನೂ ಗೊಂದಲ ಮುಗಿದಿಲ್ಲ. ಈ ಖಾತೆ ಹೊಂದಲು ಯಾರೋಬ್ಬರು ಮುಂದೆ ಬರುತ್ತಿಲ್ಲ.
ಸದ್ಯ ಬಂಡೆಪ್ಪ ಕಾಶೆಂಪುರ್ ಬಳಿ ಇರುವ ಸಹಕಾರ ಖಾತೆಯನ್ನು ಜಿ.ಟಿ ದೇವೇಗೌಡ ಅವರಿಗೆ ನೀಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ  ಕಾಶೆಂಪುರ್ ತಮ್ಮ ಖಾತೆ ಬಿಟ್ಟುಕೊಡಲು ಸಿದ್ದರಾಗಿಲ್ಲ, ಈಗಾಗಲೇ ಇಲಾಖೆಯಲ್ಲಿ  ಹಲವು ಮಹತ್ವದ ಬದಲಾವಣೆ ತರುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
ಖಾತೆ ಬಿಟ್ಟುಕೊಡುವ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಯಾವುದೇ ಮಾಹಿತಿ ಬಂದಿಲ್ಲ, ರೈತರ ಅಗತ್ಯತೆಗಳನ್ನು ಪೂರೈಸಲು ಹಾಗೂ ನೇರವಾಗಿ ಅವರ ಸೇವೆ ಮಾಡಲು ಬಯಸಿ ನಾನು ಸಹಕಾರ ಖಾತೆ ಕೇಳಿದ್ದೆ, ಅದರಂತೆ ಪಡೆದಿದ್ದೇನೆ,ಹೀಗಾಗಿ ಖಾತೆಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಜಿ.ಟಿ ದೇವೇಗೌಡರಿಗೆ ಸಹಕಾರ ಖಾತೆ ನೀಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆಯಲ್ಲ ಎಂಬ  ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ನನಗೇನು ತಿಳಿದಿಲ್ಲ, ನನಗೆ ನೀಡಿರುವ ಇಲಾಖೆಯಲ್ಲಿ ನಾನು ಈಗಾಗಲೇ ಕೆಲಸ ಆರಂಭಿಸಿದ್ದೇನೆ, ಮುಖ್ಯಮಂತ್ರಿ ಕುಮಾರ ಸ್ವಾಮಿ ವಹಿಸಿರುವ ಖಾತೆಯಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನನ್ನ ಖಾತೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT