ಸಮನ್ವಯ ಸಮಿತಿ ಸಭೆಗೆ ತೆರಳುತ್ತಿರುವ ಸಿದ್ದರಾಮಯ್ಯ ಡಿಸಿಎಂ ಪರಮೇಶ್ವರ್ ಮತ್ತು ವೇಣುಗೋಪಾಲ್ 
ರಾಜಕೀಯ

ಸಿದ್ದರಾಮಯ್ಯ ಸರ್ಕಾರದ 'ಭಾಗ್ಯ'ಗಳ ಮುಂದುವರಿಕೆ: ಶೀಘ್ರವೇ ನಿಗಮ-ಮಂಡಳಿ ನೇಮಕ

ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಾಧಿಸಲು ರಚಿಸಲಾಗಿರುವ ಜೆಡಿಎಸ್ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಗುರುವಾರ ...

ಬೆಂಗಳೂರು: ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಾಧಿಸಲು ರಚಿಸಲಾಗಿರುವ ಜೆಡಿಎಸ್ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಗುರುವಾರ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಿತು. 
ಕಾಂಗ್ರೆಸ್ ಜೆಡಿಎಸ್‌ನವರು ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಸಮ್ಮಿಶ್ರ ಸರ್ಕಾರ ಆದ ಕಾರಣ ಎರಡು ಪ್ರಣಾಳಿಕೆಯನ್ನು ಜಾರಿಗೊಳಿಸೋದು ಕಷ್ಟದ ಕೆಲಸ. ಇದು ಐದು ವರ್ಷದ ಪ್ರಣಾಳಿಕೆ. ಹೀಗಾಗಿ ಒಂದು ಕಮಿಟಿ ಮಾಡಲು ತೀರ್ಮಾನಿಸಲಾಗಿದೆ. ಕಾಂಗ್ರೆಸ್‌ನಿಂದ ಮೂರು ಮತ್ತು ಜೆಡಿಎಸ್‌ನಿಂದ ಇಬ್ಬರು ಇರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 
ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲಾಗುತ್ತದೆ. ಆ ಬಗ್ಗೆ 10 ದಿನದೊಳಗೆ ವರದಿ ಕೊಡಬೇಕು. ಅದನ್ನು ಸಮಿತಿ ಮುಂದೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿಂದಿನ ಸರ್ಕಾರ ಮಾಡಿದ ಎಲ್ಲಾ ಪ್ರಮುಖ ಯೋಜನೆಗಳು ಹಾಗೂ ಬಜೆಟ್ ಹಾಗೆಯೇ ಮುಂದುವರಿಯುತ್ತದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಯಾದ ಮೇಲೆ ಹೊಸ ಯೋಜನೆ ಜಾರಿ ಮಾಡಲಾಗುತ್ತದೆ. 
ಸಿಎಂ ಹಾಗೂ ಡಿಸಿಎಂ ಚರ್ಚೆ ಮಾಡಿ ಮೊದಲು 30 ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುತ್ತದೆ. ಅತೃಪ್ತ ಶಾಸಕರ ಬಗ್ಗೆ ಕೂಡ ಚರ್ಚೆ ಮಾಡಿದ್ದೇವೆ. ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ವಿಚಾರ ಆಡಳಿತಾತ್ಮಕ ತೀರ್ಮಾನ. ಅದನ್ನು ಸಿಎಂ, ಡಿಸಿಎಂ ಮಾಡುತ್ತಾರೆ ಎಂದು ಹೇಳಿದ್ದಾರೆ.
ಇನ್ನೂ ಎರಡು ಪಕ್ಷಗಳಲ್ಲಿ ಶಾಸಕರ ಭಿನ್ನಮತವಿದ್ದು, ಅದನ್ನು ನಿವಾರಿಸಲು ಎರಡು ಪಕ್ಷಗಳ ಮುಖಂಡರು ಇದನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT