ಲೋಕೋಪಯೋಗಿ ಸಚಿವ ಎಚ್​.ಡಿ ರೇವಣ್ಣ 
ರಾಜಕೀಯ

ಇಲಾಖೆ ಕೆಲಸ ಬಿಟ್ಟು ಬೇರೇನೂ ಮಾಡಿಲ್ಲ, ಸೂಪರ್ ಸಿಎಂ ನಾನಲ್ಲ: ಎಚ್.ಡಿ ರೇವಣ್ಣ

ರೇವಣ್ಣ ಸೂಪರ್ ಸಿಎಂ ಆಗಿದ್ದಾರೆ ಎಂದು ಎಲ್ಲರೂ ಪುಕ್ಕಟೆ ಪ್ರಚಾರ ಕೊಡುತ್ತಿದ್ದಾರೆ. ಆದರೆ ಲೋಕೋಪಯೋಗಿ ಇಲಾಖೆ ಕೆಲಸ ಬಿಟ್ಟು ಬೇರೇನೂ ನಾನು ಮಾಡಿಲ್ಲ

ಹುಬ್ಬಳ್ಳಿ: ರೇವಣ್ಣ ಸೂಪರ್ ಸಿಎಂ ಆಗಿದ್ದಾರೆ ಎಂದು ಎಲ್ಲರೂ ಪುಕ್ಕಟೆ ಪ್ರಚಾರ ಕೊಡುತ್ತಿದ್ದಾರೆ. ಆದರೆ ಲೋಕೋಪಯೋಗಿ ಇಲಾಖೆ ಕೆಲಸ ಬಿಟ್ಟು ಬೇರೇನೂ ನಾನು ಮಾಡಿಲ್ಲ ಎನ್ನುವುದಾಗಿ ಲೋಕೋಪಯೋಗಿ ಸಚಿವ ಎಚ್​.ಡಿ ರೇವಣ್ಣ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ  ಅಧಿಕಾರಿಗಳ ಸಭೆ ಬಳಿಕ ಮಾದ್ಯಮಗಳ ಜತೆ ಮಾತನಾಡಿದ ಸಚಿವರು ಜನಸಂಪನ್ಮೂಲ ಹಾಗೂ ವೈದ್ಯಕೀಯ ಸಚಿವ ಡಿ.ಕೆ ಶಿವಕುಮಾರ್ ಮತ್ತು ನಾನು ಚೆನಾಗಿದ್ದೇವೆ. ಆದರೆ ಕೆಲ ಮಂದಿ ನಮ್ಮಗಳ ನಡುವೆ ಜಗಳ ತಂದಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
"ನೀರಾವರಿ ಇಲಾಖೆಯಲ್ಲಿ ನಾನು ಯಾವ ಹಸ್ತಕ್ಷೇಪ ಮಾಡಿಲ್ಲ ಎಂದು ಬಹಿರಂಗವಾಗಿ ಹೇಳಿದ್ದೇನೆ. ಡಿ.ಕೆ. ಶಿವಕುಮಾರ್ ಹಾಗೂ ಣಾನು ಚೆನ್ನಾಗಿದ್ದೇವೆ.ನಾನು ಸೂಪರ್ ಸಿಎಂ ಆಗಿದ್ದೇನೆ ಎಂದು ಪುಕ್ಕಟೆ ಪ್ರಚಾರ ಕೊಡುತ್ತಿದ್ದಾರೆ. ಆದರೆ ಣಾನು ನನ್ನ ಇಲಾಖೆಯಾದ ಲೋಕೋಪಯೋಗಿ ಇಲಾಖೆ ಕೆಲಸ ಬಿಟ್ಟು ಬೇರೆ ಕೆಲಸ ಮಾಡಿಲ್ಲ." ಸಚಿವರು ಹೇಳಿದರು.
ಬಜೆಟ್ ಬಗ್ಗೆ ಕೇಳಿದರೆ ಸಲಹೆ ನೀಡುವೆ
ಪೂರ್ಣ ಪ್ರಮಾಣದ ಬಜೆಟ್, ಪೂರಕ ಬಜೆಟ್ ಮಂಡನೆ ಬಗ್ಗೆ ನನ್ನ ಬಳಿ ಯಾರೇ ಸಲಹೆ ಕೇಳಿದರೆ ಅವರಿಗೆ ಸಲಹೆ ನಿಡುತ್ತೇನೆ. ಎಂದು ಹೇಳಿರುವ ರೇವಣ್ಣ ಬಸವರಾಜ ಹೊರಟ್ಟಿ ಉನ್ನತ ಶಿಕ್ಷಣ ಇಲಾಖೆಗೆ ಅಪಾರ ಕೊಡುಗೆ ನೀಡಿದ್ದಾರೆ.30 ವರ್ಷಗಳಲ್ಲಿ ಹಲವಾರು ಸಮಸ್ಯೆಗಳನ್ನು ಅವರು ಬಗೆಹರಿಸಿದ್ದಾರೆ.ಹೊರಟ್ಟಿ ಮತ್ತು ಕೋನರಡ್ಡಿ ಇಬ್ಬರಿಗೂ ಸೂಕ್ತ ಸ್ಥಾನಮಾನ ಸಿಗಬೇಕಿದೆ ಎಂದರು.
ಸರ್ಕಾರ ಐದು ವರ್ಷ ಸಂಪೂರ್ಣ ಅಧಿಕಾರದಲ್ಲಿದೆ. ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು ವರ್ಗಾವಣೆ ವಿಚಾರವಾಗಿ ಆರ್‌ಡಿಪಿಆರ್ ಇಲಾಖೆಗೆ ಅಧಿಕಾರ ನೀಡಲಾಗಿದೆ.ವರ್ಗಾವಣೆ ಮಾಡಿಸಿಕೊಳ್ಳುವುದು ಅವರವರಿಗೆ ಬಿಟ್ಟದ್ದು.ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT