ಜಿ.ಟಿ ದೇವೇಗೌಡ 
ರಾಜಕೀಯ

ಬದಲಾಗದ ಖಾತೆ: ಷರತ್ತಿನೊಂದಿಗೆ 'ಉನ್ನತ ಶಿಕ್ಷಣ'ಕ್ಕೆ ಜಿಟಿ ದೇವೇಗೌಡ ಒಪ್ಪಿಗೆ!

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅಂತಿಮವಾಗಿ ಉನ್ನತ ಶಿಕ್ಷಣ ಖಾತೆಯನ್ನು ವಹಿಸಿಕೊಳ್ಳಲು ಒಪ್ಪಿದ್ದಾರೆ....

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅಂತಿಮವಾಗಿ ಉನ್ನತ ಶಿಕ್ಷಣ ಖಾತೆಯನ್ನು ವಹಿಸಿಕೊಳ್ಳಲು ಒಪ್ಪಿದ್ದಾರೆ.
ಈ ಮೊದಲು ಉನ್ನತ ಶಿಕ್ಷಣ ತಮಗೆ ಬೇಡ, ಬೇರೆ ಖಾತೆ ನೀಡಿ ಎಂದು ಜಿಟಿಡಿ ಮನವಿ ಮಾಡಿದ್ದರು,  ಆದರೆ ಖಾತೆ ಬದಲಾವಣೆಗೆ ಸಿಎಂ ಕುಮಾರ ಸ್ವಾಮಿ ಒಪ್ಪಿರಲಿಲ್ಲ.
ಗುರುವಾರ ಜಿ.ಟಿ ದೇವೇಗೌಡ ಅವರನ್ನು ಭೇಟಿ ಮಾಡಿದ ಕುಮಾರ ಸ್ವಾಮಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ, ಶುಕ್ರವಾರ ಚಾರ್ಜ್ ತೆಗೆದುಕೊಳ್ಳುವುದಾಗಿ ಜಿಟಿಡಿ ತಿಳಿಸಿದ್ದಾರೆ.
ಆದರೆ ಉನ್ನತ ಶಿಕ್ಷಣ ಖಾತೆ ವಹಿಸಿಕೊಳ್ಳಲು ಜಿಟಿಡಿ ಷರತ್ತು ವಿಧಿಸಿದ್ದಾರೆ. ಮೈಸೂರು ವಿವಿ ಮಾಜಿ ಉಪ ಕುಲಪತಿ ಹಾಗೂ ಎಚ್.ಡಿ ದೇವೇಗೌಡರ ಸಂಬಂಧಿಯಾಗಿರುವ ಪ್ರೊ.ಕೆ.ಎಸ್ ರಂಗಪ್ಪ ತಮ್ಮ ಖಾತೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು, ಮೂಗು ತೂರಿಸಬಾರದು ಎಂಬ ಷರತ್ತು ಹಾಕಿದ್ದು, ಈ ಷರತ್ತಿಗೆ ಸಿಎಂ ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT