ಸಿದ್ದರಾಮಯ್ಯ 
ರಾಜಕೀಯ

ಸಿದ್ದರಾಮಯ್ಯ ಹೇಳಿಕೆ ಮತ್ತೊಂದು ವಿಡಿಯೋ ವೈರಲ್ : ಸರ್ಕಾರದ ಭವಿಷ್ಯ ಅಭದ್ರ

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಧೀರ್ಘಾವದಿ ಬಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ದೋಸ್ತಿ ಸರ್ಕಾರಕ್ಕೆ....

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಧೀರ್ಘಾವದಿ ಬಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ದೋಸ್ತಿ ಸರ್ಕಾರಕ್ಕೆ ಮತ್ತೊಮ್ಮೆ ಇರಿಸು ಮುರಿಸು ಉಂಟು ಮಾಡಿದೆ.
ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಉಳಿಯುವುದು ಕಷ್ಟ,  ಐದು ವರ್ಷಗಳ ಪೂರ್ಣಾವಧಿ ಸರ್ಕಾರ ನೀಡುವುದು ಸಾಧ್ಯವಿಲ್ಲ,  ನೋಡೋಣ ಲೋಕಸಭೆ ಚುನಾವಣೆ ಮುಗಿಯಲಿ, ಆನಂತರ ಏನೇನು ಬೆಳವಣಿಗೆಗಳು ಆಗುತ್ತವೆಯೋ ಎಂಬುದನ್ನು ಕಾದು ನೋಡೋಣ ಎಂದು ಹೇಳಿರುವ ವಿಡಿಯೋ ವೈರ್ ಆಗಿದೆ. 
ಈ ವಿಡಿಯೋವನ್ನು ಸ್ಥಳೀಯ ಸುದ್ದಿ ವಾಹಿನಿಗಳು ಪ್ರಸಾರ ಮಾಡಿವೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವೇಳೆ ತಮ್ಮ ಆಪ್ತರ ಜೊತೆ ಮಾತನಾಡಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. 
ಇನ್ನೂ ಎರಡು ದಿನಗಳ ಹಿಂದೆ ರಾಜ್ಯ ಬಜೆಟ್ ಸಂಬಂಧ ಮಾತನಾಡಿದ್ದ ಸಿದ್ದರಾಮಯ್ಯ ಮತ್ತೆ ಹೊಸ ಬಜೆಟ್ ಮಂಡಿಸುವ ಅಗತ್ಯವೇನಿತ್ತು,  ಪೂರಕ ಬಜೆಟ್ ಮಂಡಿಸಿದ್ದರೇ ಸಾಕಾಗಿತ್ತು ಎಂದು ಅಸಮಾಧಾನ ವ್ಯಕ್ತ ಪಡಿಸಿರುವ ವಿಡಿಯೋ ಕೂಡ ವೈರಲ್ ಆಗಿತ್ತು.
ಇನ್ನೂ ಈ ವಿಡಿಯೊ ಹೊರಬಿದ್ದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣ ಅಧಿಕಾರ ನಡೆಸಲಿದೆ. ಜೆಡಿಎಸ್ ಗೆ ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ ಎಂದರು. ನೀವು ಪದ್ ಪದೇ ಎಷ್ಟ್ ಬಾರಿ ಕೇಳಿದರ ನನ್ನ ಉತ್ತರ ಇದೇ ಆಗಿರುತ್ತೆ, ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣ ಗೊಳಿಸುವುದು ಖಚಿತ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT