ಸಚಿವ ಜಮೀರ್ ಅಹಮದ್ ಖಾನ್ 
ರಾಜಕೀಯ

ಬೆನ್ಝ್, ಬಿಎಂಡಬ್ಲ್ಯೂ ಕಾರು ಕೇಳಿಲ್ಲ; ಯೂ-ಟರ್ನ್ ಹೊಡೆದ ಸಚಿವ ಜಮೀರ್

ರೈತರ ಸಾಲಮನ್ನಾ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಒದ್ದಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ನಾನು ಬೆನ್ಝ್, ಬಿಎಂಡಬ್ಲ್ಯೂ ನಂತರ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಹೊಸ ಕಾರು ಖರೀದಿಸಿಕೊಡಿ ಎಂದು...

ಬೆಂಗಳೂರು: ರೈತರ ಸಾಲಮನ್ನಾ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಒದ್ದಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ನಾನು ಬೆನ್ಝ್, ಬಿಎಂಡಬ್ಲ್ಯೂ ನಂತರ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಹೊಸ ಕಾರು ಖರೀದಿಸಿಕೊಡಿ ಎಂದು ಕೇಳಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ. 
ತಮಕೆ ಪ್ರಸ್ತುತ ಸರ್ಕಾರ ನೀಡಿರುವ ಕಾರನ್ನು ಬೇಡ ಎನ್ನುತ್ತಿದ್ದೀರಂತಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಅವರು ಜನರಿಗೆ ಕೊಟ್ಟ ಮಾತಿನಂತೆ ಸಾಲ ಮನ್ನಾ ಮಾಡಲು ಒದ್ದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾನು ಬೆಂಜ್, ಬಿಎಂಡಬ್ಲ್ಯೂ, ನಂತರ ಕೋಟ್ಯಾಂತರ ಬೆಲೆ ಬಾಳುವ ಕಾರು ಖರೀದಿಸಿ ಕೊಡಿ ಎಂದು ಕೇಳಿಲ್ಲ. ಇಲಾಖೆಯಲ್ಲಿಯೇ ಇರುವ ಬೇರೆ ಕಾರು ಬದಲಿಸಿಕೊಡಿ ಎಂದು ಹೇಳಿದ್ದೇನೆಂದು ಹೇಳಿದ್ದಾರೆ. 
ರೈತರಿಗೆ ಒಳ್ಳೆಯದಾಗುತ್ತದೆ ಎನ್ನುವುದಾದರೆ, ಈಗ ಕೊಟ್ಟಿರುವ ಕಾರೂ ಕೂಡ ಬೇಡ, ಅದನ್ನೂ ಕೂಡ ವಾಪಸ್ ಕೊಡುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT