ಸಂಗ್ರಹ ಚಿತ್ರ 
ರಾಜಕೀಯ

ನೋ ರಾಜಕೀಯ, ಓನ್ಲಿ ಪ್ರಜಾಕೀಯ, ಕೆಪಿಜೆಪಿಗೆ ಉಪೇಂದ್ರ ಗುಡ್ ಬೈ

ಯಾವುದೇ ಕಾರಣಕ್ಕೂ ತಾವು ರಾಜಕೀಯ ಮಾಡುವುದಿಲ್ಲ. ತಾವು ಪ್ರಜಾಕೀಯದಲ್ಲೇ ಮುಂದುವರೆಯುತ್ತೇವೆ ಎಂದು ಹೇಳಿದ ನಟ ಉಪೇಂದ್ರ ಕೆಪಿಜೆಪಿಗೆ ರಾಜಿನಾಮೆ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ.

ಬೆಂಗಳೂರು: ಯಾವುದೇ ಕಾರಣಕ್ಕೂ ತಾವು ರಾಜಕೀಯ ಮಾಡುವುದಿಲ್ಲ. ತಾವು ಪ್ರಜಾಕೀಯದಲ್ಲೇ ಮುಂದುವರೆಯುತ್ತೇವೆ ಎಂದು ಹೇಳಿದ ನಟ ಉಪೇಂದ್ರ ಕೆಪಿಜೆಪಿಗೆ ರಾಜಿನಾಮೆ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ.
ಬೆಂಗಳೂರಿನ ತಾವರೆಕೆರೆ ಬಳಿ ಇರುವ ರುಪ್ಪೀಸ್ ರೆಸಾರ್ಟ್ ನಲ್ಲಿ ಪ್ರಜಾಕೀಯ ಅಭ್ಯರ್ಥಿಗಳೊಂದಿಗೆ ನಡೆದ ಮಹತ್ವದ ಸಭೆ ಬಳಿಕ ನಟ ಉಪೇಂದ್ರ ಈ ಬಗ್ಗೆ ಘೋಷಣೆ ಮಾಡಿದ್ದು, ತತ್ ಕ್ಷಣದಿಂದಲೇ ತಾವೂ ಹಾಗೂ ತಮ್ಮ ಅಭ್ಯರ್ಥಿಗಳು ಕೆಪಿಜೆಪಿ ಪಕ್ಷಕ್ಕೆ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದರು.
ಕೆಪಿಜೆಪಿ ಪಕ್ಷದ ಸಂಸ್ಥಾಪಕ ಮಹೇಶ್  ಗೌಡ ಅವರೊಂದಿಗಿನ ವಿರಸಕ್ಕೆ ಫುಲ್ ಸ್ಟಾಪ್ ಹಾಕಿರುವ ನಟ ಉಪೇಂದ್ರ, ತಾವು ಕೆಪಿಜೆಪಿ ಪಕ್ಷದಿಂದಲೇ ಹೊರಬರುತ್ತಿರುವುದಾಗಿ ಹೇಳಿದರು. ಅಂತೆಯೇ ತತ್ ಕ್ಷಣದಿಂದ ತಮಗೂ ಕೆಪಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು. ಅವರಿಗೆ ರಾಜಕೀಯ ಬೇಕು. ಆದರೆ ನಮಗೆ ಪ್ರಜಾಕೀಯವೇ ಬೇಕು. ನಾವೆಲ್ಲರೂ ರಾಜಕೀಯ ಒಪ್ಪಿ ಬಂದವರಲ್ಲ. ಪ್ರಜಾಕೀಯವನ್ನು ಒಪ್ಪಿ ಅದರಲ್ಲೇ ಹೋರಾಡಲು ಬಂದವರು ನಾವು. ಪ್ರಜಾಕೀಯವನ್ನು ಒಪ್ಪಿ ಅಪ್ಪಿಕೊಂಡವರು ನಾವು. ಹೀಗಾಗಿ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಮರಳುವುದಿಲ್ಲ. ಹೀಗಾಗಿಯೇ ಕೆಪಿಜೆಪಿಗೆ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಉಪೇಂದ್ರ ಘೋಷಣೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT