ರಾಜಕೀಯ

ಸರ್ಕಾರಿ ಆಹ್ವಾನ ಪತ್ರಿಕೆಗಳಲ್ಲಿ ಯತೀಂದ್ರ- ಸುನೀಲ್ ಬೋಸ್ ಹೆಸರು: ಕಾವೇರಿದ ಚರ್ಚೆ

Shilpa D
ಮೈಸೂರು: ಸರ್ಕಾರಿ ಆಹ್ವಾನ ಪತ್ರಿಕೆಗಳಲ್ಲಿ ಸಿಎಂ ಪುತ್ರ ಯತೀಂದ್ರ ಹಾಗೂ ಲೋಕೋಪಯೋಗಿ ಸಚಿವ ಎಚ್ ಸಿ ಮಹಾದೇವಪ್ಪ  ಪುತ್ರ ಸುನೀಲ್ ಬೋಸ್ ಅವರ ಹೆಸರು ನಮೂದಿಸಿರುವುದು ಮೈಸೂರು ಜಿಲ್ಲಾ ಪಂಚಾಯತ್ ಸಭೆಯಲ್ಲಿ ಕಾವೇರಿದ ಚರ್ಚೆಗೆ ಕಾರಣವಾಯಿತು.
ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಯಾವುದೇ ಅಧಿಕೃತ ಸ್ಥಾನವಿಲ್ಲದಿದ್ದರೂ ಯತೀಂದ್ ಮತ್ತು ಸುನೀಲ್ ಬೋಸ್ ಹೆಸರನ್ನು ಹಾಕಿರುವುದರ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು,
ಹಲವು ಸರ್ಕಾರಿ ಕಾರ್ಯಕ್ರಮಗಳು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಾಗಿ ಬದಲಾಗುತ್ತಿವೆ, ವರುಣಾ ಮತ್ತು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಶಿಷ್ಟಾಚಾರ ಉಲ್ಲಂಘನೆ ಆಗುತ್ತಿವೆ. ಯತೀಂದ್ರ ಮತ್ತು ಸುನೀಲ್ ಬೋಸ್ ಇಬ್ಬರು ಸರ್ಕಾರದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ, ಆದರೆ ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
SCROLL FOR NEXT