ಮೊಯಿದ್ದೀನ್ ಬಾವಾ 
ರಾಜಕೀಯ

ಅಯ್ಯಪ್ಪ ಭಕ್ತಿಗೀತೆಗೆ ಅಗೌರವ, ದಕ್ಷಿಣ ಕನ್ನಡ ಶಾಸಕ ಮೊಯ್ದೀನ್ ಬಾವಾ ವಿರುದ್ಧ ದೂರು ದಾಖಲು

ಅಯ್ಯಪ್ಪ ಸ್ವಾಮಿ ಭಕ್ತಿಗೀತೆಯನ್ನೇ ಅನುಸರಿಸಿ ಚುನಾವಣಾ ಪ್ರಚಾರಕ್ಕಾಗಿ ಹಾಡೊಂದನ್ನು ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಶಾಸಕ ಮೊಯಿದ್ದೀನ್ ಬಾವಾ ವಿರುದ್ಧ ಪೋಲೀಸ್ ದೂರು ದಾಖಲಾಗಿದೆ.

ಪುತ್ತೂರು: ಅಯ್ಯಪ್ಪ ಸ್ವಾಮಿ ಭಕ್ತಿಗೀತೆಯನ್ನೇ ಅನುಸರಿಸಿ ಚುನಾವಣಾ ಪ್ರಚಾರಕ್ಕಾಗಿ ಹಾಡೊಂದನ್ನು ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಶಾಸಕ ಮೊಯಿದ್ದೀನ್ ಬಾವಾ ವಿರುದ್ಧ ಪೋಲೀಸ್ ದೂರು ದಾಖಲಾಗಿದೆ.  
ಅಯ್ಯಪ್ಪ ಸ್ವಾಮಿ ಭಕ್ತಿಗೀತೆಗೆ ಅವಮಾನವೆಸಗಿ ಹಿಂದೂಗಳ ಬಾವನೆಗಳಿಗೆ ಘಾಸಿ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಮುಖಂಡ  ಅರುಣ್ ಕುಮಾರ್ ಪುತ್ತಿಲ ಪುತ್ತೂರು ನಗರ ಠಾಣೆಯಲ್ಲಿ ಶಾಸಕರ ವಿರುದ್ಧ  ದೂರು ದಾಖಲಿಸಿದ್ದಾರೆ.
ಅಯ್ಯಪ್ಪ ಸ್ವಾಮಿಯ ಕುರಿತ  ಕಲ್ಲು ಮುಳ್ಳು ಶಬರಿಮಲೆಕ್ಕ್ ಎನ್ನುವ ಪ್ರಸಿದ್ಧ ಗೀತೆಯನ್ನು ಅನುಸರಿಸಿ ಮೊಯ್ದೀನ್ ಬಾವಾ ಹೆಸರಿನಲ್ಲಿ ಹಾಡೊಂದನ್ನು ರಚಿಸಲಾಗಿದೆ. ಈ ಹಾಡು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಇದರಲ್ಲಿ ಶಾಸಕರನ್ನು ಹೊಗಳಲಾಗಿದೆ. ಬಹು ಬೇಗ ಪ್ರಚಾರವಾಗಲಿ ಎನ್ನುವ ಉದ್ದೇಶದೊಡನೆ ಅಯ್ಯಪ್ಪ ಸ್ವಾಮಿ ಭಕ್ತಿಗೀತೆ ಶೈಲಿಯಲ್ಲಿ ಇದನ್ನು ಹಾಡಲಾಗಿದೆ.  ಶಾಸಕರ ಕುರಿತ ಈ ಗೀತೆಗೆ ಹಿಂದೂಪರ ಸಂಘಟನೆಗಳಿಂದ ಬಾರೀ ಆಕ್ರೋಶ ವ್ಯಕ್ತವಾಗಿತ್ತು.
ಶಾಸಕರು ತಮ್ಮ ಪ್ರಚಾರಕ್ಕಾಗಿ ಬಳಸಿರುವ ಗೀತೆ ಹಿಂದೂಗಳ ಭಾವನೆಯನ್ನು ಘಾಸಿ ಮಾಡುತ್ತದೆ. ಹಿಂದೂ ದೇವರಿಗೆ ಶಾಸಕರು  ಅವಮಾನ ಮಾಡಿದ್ದಾರೆ ಎನ್ನುವ ಆರೋಪ ಕೇಳಿತ್ತು.
ಶಾಸಕ ಬಾವಾ, ಕ್ಷೇತ್ರದಲ್ಲಿ ನಡೆಸಿದ್ದ ಅಭಿವೃದ್ಧಿ ಕಾರ್ಯಕ್ರಮಗಳ ವಿವರವನ್ನು ತುಳುವಿನಲ್ಲಿ ತಿಳಿಸುವ ಈ ಹಾಡು ಅಯ್ಯಪ್ಪ ಸ್ವಾಮಿಯ ಭಕ್ತರ ಕೋಪಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT