ಲಕ್ಷ್ಮಿವರ ತೀರ್ಥ ಸ್ವಾಮೀಜಿ 
ರಾಜಕೀಯ

ಉಡುಪಿ ಶಿರೂರು ಮಠದ ಶ್ರೀಗಳು ರಾಜಕೀಯ ಅಖಾಡಕ್ಕೆ, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ

ಉಡುಪಿಯ ಅಷ್ಠ ಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು ತಾವು ರಾಜಕೀಯಕ್ಕೆ ಇಳಿಯುವುದಾಗಿ ಘೋಷಿಸಿದ್ದಾರೆ.

ಉಡುಪಿ: ಉಡುಪಿಯ ಅಷ್ಠ ಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ  ಲಕ್ಷ್ಮೀವರ ತೀರ್ಥ ಶ್ರೀಪಾದರು ತಾವು ರಾಜಕೀಯಕ್ಕೆ ಇಳಿಯುವುದಾಗಿ ಘೋಷಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ತಾನು ಎಂದು ಅವರು ಹೇಳಿದ್ದಾರೆ.
ಉಡುಪಿಯ ಹಿರಿಯಡ್ಕದಲ್ಲಿರುವ ಶೀರೂರು ಮೂಲ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ ಸ್ವಾಮೀಜಿ ಶ್ರೀಕೃಷ್ಣ ಮುಖ್ಯಪ್ರಾಣರ ಅನುಗ್ರಹದಿಂದ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ತಾನು ತೀರ್ಮಾನಿಸಿದ್ದೇನೆ. ಬಿಜೆಪಿ ಪಕ್ಷದ ಟಿಕೆಟ್ ಸಿಕ್ಕರೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ಇಲ್ಲವಾದರೆ ಪಕ್ಷೇತರನಾಗಿ ಕಣಕ್ಕಿಳಿಯುವುದು ಖಚಿತ' ಎಂದಿದ್ದಾರೆ.
"ನನಗೆ ಯೋಗಿ ಆದಿತ್ಯನಾಥ್ ಮಾದರಿಯಾಗಿದ್ದಾರೆ. ಮಠಾಧೀಶರು ರಾಜಕೀಯ ಮಾಡಬಾರದೆಂದು ಏನಿಲ್ಲ. ಇಷ್ಟಕ್ಕೂ ಜನಪ್ರತಿನಿಧಿಗಳು ಜನರ ನಿರೀಕ್ಷೆಯ ಮಟ್ಟಕ್ಕೆ ಕೆಲಸ ಮಾಡುತ್ತಿಲ್ಲ, ಇದಕ್ಕಾಗಿ ನಾವು ಚುನಾವಣೆಗೆ ನಿಲ್ಲುತ್ತಿದ್ದೇವೆ" ಶ್ರೀಗಳು ಹೇಳಿದರು.
"ನಾನು ರಾಜಕೀಯ ಪ್ರವೇಶದ ಸಂಬಂಧ ಯಾವ ಯತಿಗಳ ಸಲಹೆಯನ್ನೂ ಪಡೆದಿಲ್ಲ. ಅಷ್ಟಮಠಗಳಿಗೆ ನನ್ನ ರಾಜಕೀಯ ಸ್ಪರ್ಧೆ ಇಷ್ಟವುಂಟೋ ಇಲ್ಲವೋ ಗೊತ್ತಿಲ್ಲ. ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಹಿತ ಯಾರ ಸಲಹೆಯನ್ನೂ ಪಡೆದಿಲ್ಲ" ಎಂದ ಶ್ರೀಗಳು ನ್ಯಾಸಿಗಳ ರಾಜಕೀಯ ಸ್ಪರ್ಧೆಯಿಂದ ಯಾವುದೇ ಧರ್ಮ ಉಲ್ಲಂಘನೆಯಾಗದು, ಇದು ಸಾಗರೋಲ್ಲಂಘನವಲ್ಲ. ಇಲ್ಲೇ ಇದ್ದು ಜನಸೇವೆ ಮಾಡುವೆವು. ಬೆಂಗಳೂರಲ್ಲಿ ಕೇಂದ್ರಿತವಾಗಿರುವ ಆಡಳಿತವನ್ನೇ ಇಲ್ಲಿಗೆ ತರುತ್ತೇವೆ" ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT