ಸಾಂದರ್ಭಿಕ ಚಿತ್ರ 
ರಾಜಕೀಯ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮಾರ್ಚ್ 23ರಂದು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ.....

ನವದೆಹಲಿ: ಮಾರ್ಚ್ 23ರಂದು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಭಾನುವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಲಿತ ಮತ್ತು ಒಕ್ಕಲಿಗ ಮತ್ತು ಮುಸ್ಲಿಂ ನಾಯಕರಿಗೆ ಆದ್ಯತೆ ನೀಡಲಾಗಿದೆ.
ದಲಿತ ನಾಯಕ ಹಾಗೂ ಕೆಪಿಸಿಸಿ ಮುಖಂಡ ಎಲ್ ಹನುಮಂತಯ್ಯ, ಒಕ್ಕಲಿಗ ನಾಯಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜೆಸಿ ಚಂದ್ರಶೇಖರ್ ಮತ್ತು ಬಳ್ಳಾರಿಯ ನಾಸಿರ್ ಹುಸೇನ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಇಂದು ಅಧಿಕೃತವಾಗಿ ಘೋಷಿಸಿದೆ.
ಕಾಂಗ್ರೆಸ್ ನ ಈ ಮೂವರು ಅಭ್ಯರ್ಥಿಗಳು ನಾಳೆ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ರಾಜ್ಯಸಭಾ ಸದಸ್ಯರಾಗಿರುವ ಕಾಂಗ್ರೆಸ್‍ ನ ಎಂ.ರೆಹಮಾನ್ ಖಾನ್, ಬಿಜೆಪಿಯ ಬಸವರಾಜ ಪಾಟೀಲ್, ರಂಗಸಾಯಿ ರಾಮಕೃಷ್ಣ ಮತ್ತು ಪಕ್ಷೇತರರಾದ ರಾಜೀವ್ ಚಂದ್ರಶೇಖರ್ ಏಪ್ರಿಲ್ 2ರಂದು ನಿವೃತ್ತಿ ಹೊಂದುತ್ತಿದ್ದಾರೆ. ನಿವೃತ್ತಿಯಿಂದ ತೆರವಾಗುವ ಈ ನಾಲ್ಕು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು , ಮಾರ್ಚ್ 23ರಂದು ಮತದಾನದ ದಿನಾಂಕ ನಿಗದಪಡಿಸಿದೆ. 
224 ಶಾಸಕರ ಬಲ ಹೊಂದಿರುವ ವಿಧಾನಸಭೆಯಲ್ಲಿ ಏಳು ಸ್ಥಾನಗಳು ಖಾಲಿ ಉಳಿದಿವೆ. ಕಾಂಗ್ರೆಸ್ 122, ಬಿಜೆಪಿ 43, ಜೆಡಿಎಸ್ 37, ಬಿಎಸ್‍ಆರ್ 3, ಕೆಜೆಪಿ 2, ಕೆಎಂಪಿ 1, ಪಕ್ಷೇತರರು 8 ಹಾಗೂ ಸಭಾಧ್ಯಕ್ಷರನ್ನು ಒಳಗೊಂಡಂತೆ 217 ಶಾಸಕರಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಶಾಸಕರ ಸಂಖ್ಯಾ ಬಲದ ಮೇಲೆ ಎರಡು ರಾಜ್ಯಸಭಾ ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದು. ಮೂರನೇಯ ಸ್ಥಾನ ಗೆಲ್ಲಬೇಕಾದರೆ ಪಕ್ಷೇತರರ ಹಾಗೂ ಜೆಡಿಎಸ್ ಶಾಸಕರ ಬೆಂಬಲ ಅಗತ್ಯವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoor ಬಳಿಕ ಪಂಜಾಬ್ ಅಸ್ಥಿರಗೊಳಿಸಲು ಪಾಕ್ proxy war; 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!

UP: 2025 ರಲ್ಲಿ 2,500 ಕ್ಕೂ ಹೆಚ್ಚು ಎನ್‌ಕೌಂಟರ್‌; 48 ಸಾವು, 8 ವರ್ಷಗಳಲ್ಲಿ ಅತಿ ಹೆಚ್ಚು

ಭಾರತ-ಬಾಂಗ್ಲಾದೇಶ ಸಂಬಂಧಗಳಿಗೆ ಖಲೀದಾ ಜಿಯಾ ಕೊಡುಗೆ ನೀಡಿದ್ದಾರೆ: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಪತ್ರ

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ

2012 ಪುಣೆ ಬಾಂಬ್ ಸ್ಫೋಟ ಆರೋಪಿ 'ಅನಾಮಿಕ'ರ ಗುಂಡೇಟಿಗೆ ಬಲಿ!

SCROLL FOR NEXT