ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ 
ರಾಜಕೀಯ

ರಾಜ್ಯ ಬಿಜೆಪಿ ಕಾರ್ಯದರ್ಶಿಗೆ ತಲೆ ಸರಿಯಿಲ್ಲ; ಸಚಿವ ಯು.ಟಿ. ಖಾದರ್

ಜಿಲ್ಲಾ ಸಚಿವ ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಉಗ್ರಗಾಮಿಗಳಿದ್ದಂತೆ ಎಂದು ಹೇಳಿದ್ದ ರಾಜ್ಯ ಬಿಜೆಪಿ ಕಾರ್ಯದರ್ಶಿ ವಿರುದ್ಧ ಖಾದರ್ ಅವರು ಭಾನುವಾರ ತೀವ್ರವಾಗಿ ಕಿಡಿಕಾಡಿದ್ದಾರೆ...

ಬೆಂಗಳೂರು: ಜಿಲ್ಲಾ ಸಚಿವ ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಉಗ್ರಗಾಮಿಗಳಿದ್ದಂತೆ ಎಂದು ಹೇಳಿದ್ದ ರಾಜ್ಯ ಬಿಜೆಪಿ ಕಾರ್ಯದರ್ಶಿ ವಿರುದ್ಧ ಖಾದರ್ ಅವರು ಭಾನುವಾರ ತೀವ್ರವಾಗಿ ಕಿಡಿಕಾಡಿದ್ದಾರೆ. 
ರವಿಕುಮಾರ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆ ಜನರಿಗೆ ಖಾದರ್ ಹಾಗೂ ರಮಾನಾಥ ರೈ ಬಗ್ಗೆ ತಿಳಿದಿದೆ. ಮೂರ್ಖರಂತೆ ಮಾತನಾಡಿರುವ ಬಿಜೆಪಿ ನಾಯಕರಿಂದ ಅವರಿಗೆ ನಮ್ಮ ಬಗ್ಗೆ ಪ್ರಮಾಣಪತ್ರಗಳ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 
ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕೆಲವರಿಗೆ ರೋಗ ಬಂದಂತಾಗುತ್ತದೆ. ಹೀಗಾಗಿಯೇ ಈ ರೀತಿಯ ಹೇಳಿಕೆಗಳನ್ನು ನೀಡುತ್ತಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿಗಳಿಗೆ ತಲೆ ಸರಿಯಿಲ್ಲ. ಹೀಗಾಗಿ ಅವರ ಹೇಳಿಕೆಗಳಿಗೆ ಪ್ರಾಮುಖ್ಯತೆ ನೀಡುವ ಅಗತ್ಯವೂ ಇಲ್ಲ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ಮತ್ತು ತ್ರಿಪುರ ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡುವ ಸಲುವಾಗಿ ಬಿಜೆಪಿ ಪ್ರತ್ಯೇಕತಾವಾದಿಗಳೊಂದಿಗೆ ಕೈ ಜೋಡಿಸಿದೆ. ಅಧಿಕಾರಕ್ಕೆ ಬರಲು ಬಿಜೆಪಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಕಾಂಗ್ರೆಸ್ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ಇದಕ್ಕೆ ಉತ್ತರ ನೀಡಬೇಕಿದೆ ಎಂದಿದ್ದಾರೆ. 
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ಗೊತ್ತಾಗಿದೆ. ಹೀಗಾಗಿ ಅವರು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಶಾಂತಿ ಹಾಗೂ ಒಗ್ಗಟ್ಟಿನ ಹಿತದೃಷ್ಟಿಯಿಂದಾದರೂ ಬಿಜೆಪಿಯವರು ಇಂತಹ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT