ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ 
ರಾಜಕೀಯ

ರಾಜ್ಯ ಬಿಜೆಪಿ ಕಾರ್ಯದರ್ಶಿಗೆ ತಲೆ ಸರಿಯಿಲ್ಲ; ಸಚಿವ ಯು.ಟಿ. ಖಾದರ್

ಜಿಲ್ಲಾ ಸಚಿವ ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಉಗ್ರಗಾಮಿಗಳಿದ್ದಂತೆ ಎಂದು ಹೇಳಿದ್ದ ರಾಜ್ಯ ಬಿಜೆಪಿ ಕಾರ್ಯದರ್ಶಿ ವಿರುದ್ಧ ಖಾದರ್ ಅವರು ಭಾನುವಾರ ತೀವ್ರವಾಗಿ ಕಿಡಿಕಾಡಿದ್ದಾರೆ...

ಬೆಂಗಳೂರು: ಜಿಲ್ಲಾ ಸಚಿವ ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಉಗ್ರಗಾಮಿಗಳಿದ್ದಂತೆ ಎಂದು ಹೇಳಿದ್ದ ರಾಜ್ಯ ಬಿಜೆಪಿ ಕಾರ್ಯದರ್ಶಿ ವಿರುದ್ಧ ಖಾದರ್ ಅವರು ಭಾನುವಾರ ತೀವ್ರವಾಗಿ ಕಿಡಿಕಾಡಿದ್ದಾರೆ. 
ರವಿಕುಮಾರ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆ ಜನರಿಗೆ ಖಾದರ್ ಹಾಗೂ ರಮಾನಾಥ ರೈ ಬಗ್ಗೆ ತಿಳಿದಿದೆ. ಮೂರ್ಖರಂತೆ ಮಾತನಾಡಿರುವ ಬಿಜೆಪಿ ನಾಯಕರಿಂದ ಅವರಿಗೆ ನಮ್ಮ ಬಗ್ಗೆ ಪ್ರಮಾಣಪತ್ರಗಳ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 
ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕೆಲವರಿಗೆ ರೋಗ ಬಂದಂತಾಗುತ್ತದೆ. ಹೀಗಾಗಿಯೇ ಈ ರೀತಿಯ ಹೇಳಿಕೆಗಳನ್ನು ನೀಡುತ್ತಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿಗಳಿಗೆ ತಲೆ ಸರಿಯಿಲ್ಲ. ಹೀಗಾಗಿ ಅವರ ಹೇಳಿಕೆಗಳಿಗೆ ಪ್ರಾಮುಖ್ಯತೆ ನೀಡುವ ಅಗತ್ಯವೂ ಇಲ್ಲ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ಮತ್ತು ತ್ರಿಪುರ ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡುವ ಸಲುವಾಗಿ ಬಿಜೆಪಿ ಪ್ರತ್ಯೇಕತಾವಾದಿಗಳೊಂದಿಗೆ ಕೈ ಜೋಡಿಸಿದೆ. ಅಧಿಕಾರಕ್ಕೆ ಬರಲು ಬಿಜೆಪಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಕಾಂಗ್ರೆಸ್ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ಇದಕ್ಕೆ ಉತ್ತರ ನೀಡಬೇಕಿದೆ ಎಂದಿದ್ದಾರೆ. 
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ಗೊತ್ತಾಗಿದೆ. ಹೀಗಾಗಿ ಅವರು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಶಾಂತಿ ಹಾಗೂ ಒಗ್ಗಟ್ಟಿನ ಹಿತದೃಷ್ಟಿಯಿಂದಾದರೂ ಬಿಜೆಪಿಯವರು ಇಂತಹ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT