ಸಂಗ್ರಹ ಚಿತ್ರ 
ರಾಜಕೀಯ

ಯಡಿಯೂರಪ್ಪ ಜೊತೆ ಊಟ ಮಾಡಿದ ಮಾತ್ರಕ್ಕೇ ಬಿಜೆಪಿ ಸೇರೋಕೆ ಆಗುತ್ತಾ?: ಶ್ಯಾಮನೂರು ಶಿವಶಂಕರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಜೊತೆಗೆ ಊಟ ಮಾಡಿದ ಮಾತ್ರಕ್ಕೆ ಬಿಜೆಪಿ ಸೇರೋಕೆ ಆಗುತ್ತಾ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಸೇರುವ ಊಹಾಪೋಹಗಳನ್ನು ತಳ್ಳಿ ಹಾಕಿದ್ದಾರೆ.

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಜೊತೆಗೆ ಊಟ ಮಾಡಿದ ಮಾತ್ರಕ್ಕೆ ಬಿಜೆಪಿ ಸೇರೋಕೆ ಆಗುತ್ತಾ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಸೇರುವ ಊಹಾಪೋಹಗಳನ್ನು ತಳ್ಳಿ ಹಾಕಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ಯಾಮನೂರು ಶಿವಶಂಕರಪ್ಪ ಅವರು, ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಬಿಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಬೇಕಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್‌ ಪಕ್ಷಕ್ಕೆ ಬರಲಿ ಎಂದು ಹೇಳಿದ್ದಾರೆ. 
"ನಾನು ಬಿಜೆಪಿ ಸೇರುವ ವಿಚಾರ ಸುಳ್ಳು. ಕಳೆದ 50 ವರ್ಷಗಳಿಂದಲೂ ಕಾಂಗ್ರೆಸ್‌ ನಲ್ಲಿದ್ದೇನೆ. ಆಹ್ವಾನ ನೀಡಿದ ತಕ್ಷಣ ಬಿಜೆಪಿಗೆ ಹೋಗಲು ಸಾಧ್ಯವೇ? ಯಡಿಯೂರಪ್ಪನ ಜತೆ ಊಟ ಮಾಡಿದ ತಕ್ಷಣ ಬಿಜೆಪಿ ಸೇರುತ್ತಾರಾ? ಬೇಕಾದರೆ ಯಡಿಯೂರಪ್ಪನವರೇ ಕಾಂಗ್ರೆಸ್‌ಗೆ ಬರಲಿ ಎಂದು ಹೇಳಿದರು. 
ಶ್ಯಾಮನೂರು ಶಿವಶಂಕರಪ್ಪ-ಯಡಿಯೂರಪ್ಪ ರಹಸ್ಯ ಮಾತುಕತೆ
ಮತ್ತೊಂದೆಡೆ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದ ಮೂಲಕ ವೀರಶೈವ ಸಮುದಾಯದ ಮತ ವಿಭಜನೆಯಾಗುವ ಅಪಾಯವನ್ನರಿತ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಪಕ್ಷದ ಪ್ರಮುಖ ಒಕ್ಕಲಿಗ ಸಮುದಾಯದ ನಾಯಕ ಶ್ಯಾಮನೂರು ಶಿವಶಂಕರಪ್ಪ ಜತೆಗೆ ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಸಿದ್ಧಗಂಗಾ ಮಠದಲ್ಲಿ ಈ ಇಬ್ಬರೂ ನಾಯಕರು ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ತಮಗೆ ಉರುಳಾಗಬಹುದು ಎಂದು ಅರಿತ ಬಿಎಸ್ ವೈ ಅದನ್ನು ಉಪಾಯವಾಗಿಯೇ ನಿವಾರಿಸಲು ದಾರಿ ಹುಡಕುತ್ತಿದ್ದಾರೆ ಎಂಬ ಚರ್ಚೆಗಳು ಗಾಢವಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT