ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಬಂಡಾಯ ಶಾಸಕರ ವಿರುದ್ಧದ ಅನರ್ಹತೆ ಅರ್ಜಿ ವಿಚಾರಣೆ ನಡೆಸಿ : ಸ್ಪೀಕರ್ ಗೆ ಜೆಡಿಎಸ್ ಮನವಿ

2016 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಏಳು ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿರುವ ...

ಬೆಂಗಳೂರು: 2016 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಏಳು ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿರುವ ಜೆಡಿಎಸ್ 7 ಬಂಡಾಯ ಶಾಸಕರ ಅನರ್ಹತೆ ಸಂಬಂಧಿತ ಪಕ್ಷ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ನೀಡದೇ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿದ್ದರಿಂದಾಗಿ ಅವರ ವಿರುದ್ಧ ವಿಧಾನಸಭಾ ಸ್ಪೀಕರ್‌ಗೆ ದೂರು ನೀಡಲಾಗಿತ್ತು. ಆದರೆ, ಸ್ಪೀಕರ್‌ ಇಲ್ಲಿಯವರೆಗೂ ಕ್ರಮ ತೆಗೆದುಕೊಂಡಿಲ್ಲ,
ಈ ಸಂಬಂಧ ವಿಧಾನಸಭೆ ಸ್ಪೀಕರ್  ಕಚೇರಿಗೆ ಗುರುವಾರ ಪತ್ರ ಸಲ್ಲಿಸಿರುವ ಜೆಡಿಎಸ್, ತಮ್ಮ ಅರ್ಜಿಯನ್ನು ಹಲವು ತಿಂಗಳುಗಳಿಂದ ವಿಚಾರಣೆಗೆ ತೆಗೆದು ಕೊಂಡಿಲ್ಲ, ಈ ಸಂಬಂಧ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ಸ್ಪೀಕರ್ ಅವರು ಈ ವಿಷಯವನ್ನು ಪರಿಗಣನೆಗೆ ತೆಗೆದುಕೊಂಡು ಶನಿವಾರ ಅಥವಾ ಸೋಮವಾರ ವಿಚಾರಣೆ ನಡೆಸಬೇಕೆಂದು ಕೋರಿದೆ.
ಮಾರ್ಚ್ 23 ರಂದು ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಪಕ್ಷದಿಂದ ಉಚ್ಚಾಟಿಸಿರುವ 7 ಬಂಡಾಯ ಅಭ್ಯರ್ಥಿಗಳು ಮತ ಚಲಾಯಿಸದಂತೆ ತಡೆಯಲು ಈ ಕ್ರಮ ಕೈಗೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT