ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಬಂಡಾಯ ಶಾಸಕರ ವಿರುದ್ಧದ ಅನರ್ಹತೆ ಅರ್ಜಿ ವಿಚಾರಣೆ ನಡೆಸಿ : ಸ್ಪೀಕರ್ ಗೆ ಜೆಡಿಎಸ್ ಮನವಿ

2016 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಏಳು ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿರುವ ...

ಬೆಂಗಳೂರು: 2016 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಏಳು ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿರುವ ಜೆಡಿಎಸ್ 7 ಬಂಡಾಯ ಶಾಸಕರ ಅನರ್ಹತೆ ಸಂಬಂಧಿತ ಪಕ್ಷ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ನೀಡದೇ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿದ್ದರಿಂದಾಗಿ ಅವರ ವಿರುದ್ಧ ವಿಧಾನಸಭಾ ಸ್ಪೀಕರ್‌ಗೆ ದೂರು ನೀಡಲಾಗಿತ್ತು. ಆದರೆ, ಸ್ಪೀಕರ್‌ ಇಲ್ಲಿಯವರೆಗೂ ಕ್ರಮ ತೆಗೆದುಕೊಂಡಿಲ್ಲ,
ಈ ಸಂಬಂಧ ವಿಧಾನಸಭೆ ಸ್ಪೀಕರ್  ಕಚೇರಿಗೆ ಗುರುವಾರ ಪತ್ರ ಸಲ್ಲಿಸಿರುವ ಜೆಡಿಎಸ್, ತಮ್ಮ ಅರ್ಜಿಯನ್ನು ಹಲವು ತಿಂಗಳುಗಳಿಂದ ವಿಚಾರಣೆಗೆ ತೆಗೆದು ಕೊಂಡಿಲ್ಲ, ಈ ಸಂಬಂಧ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ಸ್ಪೀಕರ್ ಅವರು ಈ ವಿಷಯವನ್ನು ಪರಿಗಣನೆಗೆ ತೆಗೆದುಕೊಂಡು ಶನಿವಾರ ಅಥವಾ ಸೋಮವಾರ ವಿಚಾರಣೆ ನಡೆಸಬೇಕೆಂದು ಕೋರಿದೆ.
ಮಾರ್ಚ್ 23 ರಂದು ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಪಕ್ಷದಿಂದ ಉಚ್ಚಾಟಿಸಿರುವ 7 ಬಂಡಾಯ ಅಭ್ಯರ್ಥಿಗಳು ಮತ ಚಲಾಯಿಸದಂತೆ ತಡೆಯಲು ಈ ಕ್ರಮ ಕೈಗೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT