ಪ್ರಮೋದ್ ಮಧ್ವರಾಜ್ 
ರಾಜಕೀಯ

ಪ್ರಮೋದ್ ಮದ್ವರಾಜ್ ಪ್ರಚಾರ ವಾಹನಕ್ಕಿಲ್ಲ ಕಾಂಗ್ರೆಸ್ ಚಿಹ್ನೆ: ಬಿಜೆಪಿ ಸೇರ್ಪಡೆಗೆ ಸಿದ್ಧತೆ?

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಚುನಾವಣಾ ಪ್ರಚಾರಕ್ಕಾಗಿ ನಿರ್ಮಿಸಲಾಗಿರುವ ಪ್ರಚಾರ ವಾಹನ ಎಲ್ಲರ ಗಮನ ಸೆಳೆಯುತ್ತಿದೆ...

ಉಡುಪಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ  ಸ್ಪರ್ದಿಸಲು ಟಿಕೆಟ್ ಪಡೆಯಲು ಆಕಾಂಕ್ಷಿಗಳು ಮುಗಿ ಬೀಳುತ್ತಿದ್ದಾರೆ. ಆದರೆ ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಕೂತೂಹಲಕಾರಿ ಬೆಳವಣಿಗೆಯೊಂದು ಸದ್ದಿಲ್ಲದೇ ನಡೆದಿದೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಚುನಾವಣಾ ಪ್ರಚಾರಕ್ಕಾಗಿ ನಿರ್ಮಿಸಲಾಗಿರುವ ಪ್ರಚಾರ ವಾಹನ ಎಲ್ಲರ ಗಮನ ಸೆಳೆಯುತ್ತಿದ್ದು, ಈ ವಾಹನದಲ್ಲಿ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಕಾಂಗ್ರೆಸ್ ಚಿಹ್ನೆ ಯಾವುದು ಇಲ್ಲದ ಕಾರಣ ಪ್ರಶ್ನೆ ಎದ್ದಿದೆ.
ಇಲಾಖೆಯ ಮಾಹಿತಿಯಾಗಲೀ, ರಾಜ್ಯ ಸರಕಾರದ ಕಲ್ಯಾಣ ಯೋಜನೆಗಳಾಗಲೀ ಈ ಪ್ರಚಾರ ವಾಹನದಲ್ಲಿಲ್ಲ. ಬದಲಾಗಿ ವಾಹನದ ಹೋರ್ಡಿಂಗ್ ಗಳಲ್ಲಿ ಸಚಿವರೇ ಮಿಂಚುತ್ತಿದ್ದಾರೆ. ಫೋಟೋದ ಜೊತೆಗೆ ಅಭಿವೃದ್ದಿಯೊಂದಿಗೆ ನನ್ನ ಹೆಜ್ಜೆ, ಜೊತೆಗಿರಲಿ ನಿಮ್ಮ ಹೆಜ್ಜೆ ಎಂಬ ಬರಹಗಳಿವೆ. ಇದು ಎಲ್ಲರ ಗಮನ ಸೆಳೆಯುತ್ತಿದೆ.
ಎಲ್ಲಿಯೂ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಪ್ರಯತ್ನ ಈ ವಾಹನದಲ್ಲಿಲ್ಲ. ಕೆಲ ತಿಂಗಳುಗಳಿಂದ ಸಚಿವ ಮಧ್ವರಾಜ್ ಬಿಜೆಪಿ ಸೇರ್ಪಡೆ ಸುದ್ದಿಗೆ ರೆಕ್ಕೆ ಪುಕ್ಕ ಬಂದಿತ್ತು. ಈ ಕಾರಣಕ್ಕಾಗಿಯೇ ಸಚಿವರು ರಾಜ್ಯ ಸರಕಾರದ ಸಾಧನೆಗಳನ್ನು ಬಿಂಬಿಸಲಿಲ್ಲವೇ ಎಂಬ ಅನುಮಾನಗಳು ಮೂಡಿವೆ.
ಬಿಜೆಪಿ ಸೇರುವುದು ಜೋಕ್. ಇದು ಬರೀ ಅಪಪ್ರಚಾರ. ಅವರು ಕಾಂಗ್ರೆಸ್ ನಲ್ಲೇ ಇದ್ದಾರೆ. ಮುಂದೆಯೂ ಇರುತ್ತಾರೆ ಎಂದು ಹೇಳಿದ್ದಾರೆ. ಬಿಜೆಪಿಯವರು ಬರೀ ಅಪ ಪ್ರಚಾರ ಮಾಡುವುದನ್ನು ಬಿಡಿ ಅಂತ ಹೇಳಿದ್ದಾರೆ. 
ತಮ್ಮ ವಾಹನವನ್ನು ತಮ್ಮ ಅಭಿಮಾನಿಗಳು ತಯಾರಿಸಿದ್ದು,  ಅವರ ಸ್ವಂತ ಖರ್ಚಿನಲ್ಲಿ  ಸಿದ್ದಪಡಿಸಿದ್ದಾರೆ. ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಜೊತೆಗಿರುವ ವಿಡಿಯೋ ಕೂಡ ಇದೆ. ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಊಹಾಪೋಹಾ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT