ಮೈಸೂರು ಅರಮನೆಯಲ್ಲಿ ಅಮಿತ್ ಶಾ 
ರಾಜಕೀಯ

ಮೈಸೂರು ಅರಮನೆಯಲ್ಲಿ ಅಮಿತ್ ಶಾ, ರಾಜವಂಶಸ್ಥರ ಭೇಟಿ

ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಶುಕ್ರವಾರ ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ.

ಮೈಸೂರು: ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಶುಕ್ರವಾರ ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ. 
ಶುಕ್ರವಾರ ಬೆಳಗ್ಗೆ ಮೈಸೂರು ಅರಮನೆಗೆ ಆಗಮಸಿದ ಅಮಿತ್ ಶಾ ಮೈಸೂರು ರಾಜವಂಶಸ್ಥರನ್ನು ಭೇಟಿ ಮಾಡಿದರು, ರಾಜಮಾತೆ ಪ್ರಮೋದಾದೇವಿ ಒಡೆಯರ್​, ಮಹಾರಾಜ ಯದುವೀರ್​ ಒಡೆಯರ್​ ಜತೆ ಅಮಿತ್ ಶಾ ಮಾತುಕತೆ ನಡೆಸಿದರು. ಬಳಿಕ ಯದುವೀರ್​ ಒಡೆಯರ್​ ಮಗುವನ್ನು ಎತ್ತಿಕೊಂಡ ಅಮಿತ್ ಶಾ ಕೆಲಹೊತ್ತು ಆಟವಾಡಿಸಿದರು.
ಇದೇ ಮೊದಲ ಬಾರಿಗೆ ಮೈಸೂರು ಅರಮನೆಗೆ ಅಮಿತ್​ ಷಾ ಭೇಟಿ ನೀಡಿದ್ದು, ಅಲ್ಲಿನ ಸಿಬ್ಬಂದಿ ಷಾ ಅವರಿಗೆ ಕಮಲದ ಹೂವು ಕೊಟ್ಟು ಸ್ವಾಗತಿಸಿದ್ದು ವಿಶೇಷವಾಗಿತ್ತು. ಅಮಿತ್ ಶಾ ಅವರಿಗೆ ಕೇಂದ್ರ ಸಚಿವ ಅನಂತ್​ಕುಮಾರ್​, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದ ಪ್ರತಾಪ್​ ಸಿಂಹ, ಶಾಸಕ ಸಿ.ಟಿ.ರವಿ ಮತ್ತಿತರ ನಾಯಕರು ಸಾಥ್ ನೀಡಿದ್ದರು. 
ಸುತ್ತೂರಿಗೆ ಭೇಟಿ
ಇದಕ್ಕೂ ಮೊದಲು ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸ್ವಾಮೀಜಿ ಷಾ ಅವರಿಗೆ ರುದ್ರಾಕ್ಷಿ ಮಾಲೆ ಹಾಕಿ ಆಶೀರ್ವದಿಸಿದರು. ನಂತರ ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿದರು. ಕೇಂದ್ರ ಸಚಿವ ಅನಂತ್​ಕುಮಾರ್​, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದ ಪ್ರತಾಪ್​ಸಿಂಹ್​ ಇತರರು ಇದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT