ಶರದ್ ಯಾದವ್ 
ರಾಜಕೀಯ

ಬಿಜೆಪಿ ಸೋಲಿಸುವುದೇ ನಮ್ಮ ಪ್ರಮುಖ ಗುರಿ: ಶರದ್ ಯಾದವ್

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದೇ ನಮ್ಮ ಮುಖ್ಯ ಗುರಿ ಎಂದು ಜೆಡಿಯು ಮುಖಂಡ ಶರದ್ ಯಾದವ್ ...

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದೇ ನಮ್ಮ ಮುಖ್ಯ ಗುರಿ ಎಂದು ಜೆಡಿಯು ಮುಖಂಡ ಶರದ್ ಯಾದವ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂದಿನ ಲೋಕಸಭೆ ಚುನಾವಣೆಗೆ  ರಾಜ್ಯ ವಿಧಾನಸಭೆ ಚುನಾವಣೆ ಸೆಮಿಫೈನಲ್ ಇದ್ದಂತೆ, ಇಲ್ಲಿ ಬಿಜೆಪಿ ಸೋಲಿಸುವುದೇ ನಮ್ಮ ಗುರಿ' ಎಂದು ತಿಳಿಸಿದ್ದಾರೆ.
'ಕರ್ನಾಟಕದ ಚುನಾವಣೆಯನ್ನು ಇಡೀ ದೇಶದ ಜನ ನೋಡುತ್ತಿದ್ದಾರೆ.  ದೇಶದಲ್ಲಿ ಬಿಜೆಪಿಯನ್ನು ಹೊಡೆದೋಡಿಸಬೇಕು. ಬಿಜೆಪಿ ಮುಕ್ತ ಭಾರತ ಮಾಡಬೇಕು. ಅದಕ್ಕಾಗಿಯೇ ರಾಜ್ಯಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ. .
'ಕಾಂಗ್ರೆಸ್ ಬೆಂಬಲಿಸಬೇಕೋ, ಜೆಡಿಎಸ್ ಬೆಂಬಲಿಸಬೇಕೊ ಎಂಬುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಎರಡು ದಿನ ಇಲ್ಲೇ ಇರುತ್ತೇನೆ. ಪಕ್ಷದ ಕಾರ್ಯಕರ್ತರ ಜತೆ ಚರ್ಚಿಸಿ ಮಾಧ್ಯಮಗಳಿಗೆ ತಿಳಿಸುತ್ತೇ‌ನೆ ಎಂದು ವಿವರಿಸಿದ್ದಾರೆ.
ಈ ಹಿಂದೆ ಕರ್ನಾಟಕದಲ್ಲಿ ಪಕ್ಷ ಪ್ರಬಲವಾಗಿರಲಿಲ್ಲ, ರಾಜ್ಯದ ಎಲ್ಲಾ ಭಾಗಗಳ ಜನರ ಬೆಂಬಲದಿಂದಾಗಿ ಜೆಡಿಯು ಬಿಜೆಪಿ ಸೋಲಿಸಲು ಹೋರಾಟ ನಡೆಸುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT