ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಲೀಕಯ್ಯ ಗುತ್ತೇದಾರ್ 
ರಾಜಕೀಯ

ಖರ್ಗೆ ಜೊತೆಗಿನ ಮುಸುಕಿನ ಗುದ್ದಾಟ: ಗುತ್ತೇದಾರ್ ಕಾಂಗ್ರೆಸ್ ತೊರೆಯಲು ಕಾರಣ

ಮಲ್ಲಿಕಾರ್ಜುನ ಖರ್ಗೆ ಮತ್ತು ಅಫ್ಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ನಡುವಿನ ದಶಕಗಳ ಕಾಲದ ಶೀತಲಸಮರ ಕೊನೆಗೂ ಬಯಲಿಗೆ ಬಂದಿದೆ...

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಮತ್ತು ಅಫ್ಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ನಡುವಿನ ದಶಕಗಳ ಕಾಲದ ಶೀತಲಸಮರ  ಕೊನೆಗೂ ಬಯಲಿಗೆ ಬಂದಿದೆ. ಹೀಗಾಗಿ ಪಕ್ಷ ತೊರೆದು ಬಿಜೆಪಿ ಸೇರಲು ಎಲ್ಲಾ ಸಿದ್ಧತೆಗಳು ನಡೆದಿವೆ.
2009 ರಲ್ಲಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಆರಂಭವಾದ ಶೀತಲ ಸಮರ ಇಲ್ಲಿಯವರೆಗೂ ನಡೆದುಕೊಂಡು ಬಂದಿದೆ,  ಗುತ್ತೇದಾರ್ ಬೆಂಬಲಿಗರ ಮುಂದೆ ಹಾಗೂ ಮಾಧ್ಯಮದವರ ಮುಂದೆ ಮಾಲೀಕಯ್ಯ ಗುತ್ತೇದಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಲಬುರಗಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಅಪ್ಝಲಪುರ ವಿಧಾನಸಭೆ ಕ್ಷೇತ್ರದಲ್ಲಿ ಮತಗಳ ಅಂತರ ತೀರಾ ಕಡಿಮೆಯಾಗಿದೆ ಎಂಬ ಹೇಳಿಕೆ ಇಬ್ಬರ ನಡುವಿನ ವೈರತ್ವಕ್ಕೆ ನಾಂದಿ ಹಾಡಿತ್ತು.
ಇನ್ನೂ 2014ರಲ್ಲಿ ನಡೆಲ ಲೋಕಸಭೆ ಚುನಾವಣೇ ವೇಳೆ ಇದೇ ಪರಿಸ್ಥಿತಿ ಪುನಾರವರ್ತನೆಯಾಗಿತ್ತು. ಈಡಿಗ ಸಮುದಾಯದ ಪ್ರಬಲ ನಾಯಕನಾಗಿರುವ ಮಾಲೀಕಯ್ಯ ಗುತ್ತೇದಾರ್  1985, 1989, 1994, 1999, 2008 ಮತ್ತು 2013 ರಲ್ಲಿ ಅಪ್ಝಲಪುರ ಕ್ಷೇತ್ರದಿಂದ ಶಾಸಕನಾಗಿ ಆಯ್ಕೆಯಾಗಿದ್ದಾರೆ,  ತಮ್ಮ 30 ವರ್ಷಗಳ ರಾಜಕೀಯ ಜೀವನದಲ್ಲಿ ಮ್ಮೆ ಮಾತ್ರ ಬಿಜೆಪಿಯ ಎಂ.ವೈ ಪಾಟೀಲ್ ವಿರುದ್ಧ ಸೋಲನುಭವಿಸಿದ್ದರು. 
2013 ರ ವಿಧಾನಸಭೆ ಚುನಾವಣೆ ವೇಳೆ ನಾಮಪತ್ರ ಸಲ್ಲಿಕೆಗೆ ವಿರೋಧ ವ್ಯಕ್ತ ಪಡಿಸಿದ್ದ ಮಲ್ಲಿಕಾರ್ಜು ಖರ್ಗೆ ತಮಗೆ ಸಚಿವ ಆಗುವ ಅವಕಾಶವನ್ನು ತಪ್ಪಿಸಿದ್ದಾರೆ ಎಂಬುದು ಮಾಲೀಕಯ್ಯ ಗುತ್ತೇದಾರ್ ಆರೋಪವಾಗಿದೆ  ಜೆ.ಎಚ್ ಪಟೇಲ್ ಸಂಪುಟದಲ್ಲಿ ಸಚಿವನಾಗಿದ್ದ ನಾನು ಸಿದ್ದರಾಮಯ್ಯ ಸರ್ಕಾರದಲ್ಲಿಯೂ ಸಚಿವನಾಗುವ ಎಲ್ಲಾ ಅರ್ಹತೆಯಿತ್ತು, ಆದರೆ ಪ್ರಿಯಾಂಕ್ ಖರ್ಗೆಗೆ ಸಂಪುಟದಲ್ಲಿ ಸ್ಥಾನ ನೀಡಲಾಯಿತು, ನಾನು ಹಲವು ಬಾರಿ ಶಾಸಕನಾಗಿದ್ದೇನೆ, ಆದರೆ ನನ್ನನ್ನು ನಿರ್ಲಕ್ಷ್ಸಿಸಿ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ ಎಂಬುದು ಗುತ್ತೇದಾರ್ ಅವರ ಆರೋಪವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT