ರಾಮನಗರದಲ್ಲಿ ರೇಷ್ಮೆ ಬೆಳೆಗಾರರು ಮತ್ತು ರೇಷ್ಮೆ ಉದ್ಯಮದ ಮುಖಂಡರೊಂದಿಗೆ ಸಂವಾದ ನಡೆಸಿದ ಅಮಿತ್ ಶಾ 
ರಾಜಕೀಯ

ಮಂಡ್ಯದಲ್ಲಿ ವಿಶ್ವದಲ್ಲಿಯೇ ಅತ್ಯುನ್ನತ ರೇಷ್ಮೆ ಹಬ್ ಸ್ಥಾಪನೆ - ಅಮಿತ್ ಶಾ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಂಡ್ಯದಲ್ಲಿ ವಿಶ್ವದಲ್ಲಿಯೇ ಅತ್ಯುನ್ನತವಾದ ರೇಷ್ಮೆ ಹಬ್ ಸ್ಥಾಪನೆ ಮಾಡುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಂಡ್ಯದಲ್ಲಿ ವಿಶ್ವದಲ್ಲಿಯೇ ಅತ್ಯುನ್ನತವಾದ ರೇಷ್ಮೆ ಹಬ್ ಸ್ಥಾಪನೆ ಮಾಡುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ರಾಮನಗರದಲ್ಲಿ ನಿನ್ನೆ ರೇಷ್ಮೆ ಬೆಳೆಗಾರರು ಮತ್ತು ರೇಷ್ಮೆ ಉದ್ಯಮದ ಮುಖಂಡರೊಂದಿಗೆ  ಸಂವಾದ ನಡೆಸಿದ ಅಮಿತ್ ಶಾ, ರೇಷ್ಮೆ ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರಸರ್ಕಾರ ಬದ್ಧವಾಗಿದ್ದು, ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಮಹದಾಯಿ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದ ಅಮಿತ್ ಶಾ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಹಾಗೂ ಅಹಂಕಾರದ ಸಂಕೇತ. ಅಂತಹ ಸಂಸ್ಕೃತಿಯನ್ನು ನಾವು ಭಾರತದಿಂದ ತೊಲಗಿಸುತ್ತೆವೆ. ಇದು ನಮ್ಮ ಕಾಂಗ್ರೆಸ್ ಮುಕ್ತ ಭಾರತದ ವ್ಯಾಖ್ಯಾನ ಎಂದರು.

ನಾನು ಹೋದಲೆಲ್ಲಾ ಜನರುಬದಲಾವಣೆ ಬೇಕಿದೆ ಎಂದು ಹೇಳುತ್ತಾರೆ. ಜನರು ಈಗಾಗಲೇ ಕಾಂಗ್ರೆಸ್ಸನ್ನು ಕಿತ್ತೆಸೆಯುವ ನಿರ್ಧಾರ ಮಾಡಿಕೊಂಡಿದ್ದಾರೆ. ಹೀಗಿದ್ದಾಗ ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ  ಎಂದು ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

SCROLL FOR NEXT