ರಾಮನಗರದಲ್ಲಿ ರೇಷ್ಮೆ ಬೆಳೆಗಾರರು ಮತ್ತು ರೇಷ್ಮೆ ಉದ್ಯಮದ ಮುಖಂಡರೊಂದಿಗೆ ಸಂವಾದ ನಡೆಸಿದ ಅಮಿತ್ ಶಾ 
ರಾಜಕೀಯ

ಮಂಡ್ಯದಲ್ಲಿ ವಿಶ್ವದಲ್ಲಿಯೇ ಅತ್ಯುನ್ನತ ರೇಷ್ಮೆ ಹಬ್ ಸ್ಥಾಪನೆ - ಅಮಿತ್ ಶಾ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಂಡ್ಯದಲ್ಲಿ ವಿಶ್ವದಲ್ಲಿಯೇ ಅತ್ಯುನ್ನತವಾದ ರೇಷ್ಮೆ ಹಬ್ ಸ್ಥಾಪನೆ ಮಾಡುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಂಡ್ಯದಲ್ಲಿ ವಿಶ್ವದಲ್ಲಿಯೇ ಅತ್ಯುನ್ನತವಾದ ರೇಷ್ಮೆ ಹಬ್ ಸ್ಥಾಪನೆ ಮಾಡುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ರಾಮನಗರದಲ್ಲಿ ನಿನ್ನೆ ರೇಷ್ಮೆ ಬೆಳೆಗಾರರು ಮತ್ತು ರೇಷ್ಮೆ ಉದ್ಯಮದ ಮುಖಂಡರೊಂದಿಗೆ  ಸಂವಾದ ನಡೆಸಿದ ಅಮಿತ್ ಶಾ, ರೇಷ್ಮೆ ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರಸರ್ಕಾರ ಬದ್ಧವಾಗಿದ್ದು, ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಮಹದಾಯಿ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದ ಅಮಿತ್ ಶಾ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಹಾಗೂ ಅಹಂಕಾರದ ಸಂಕೇತ. ಅಂತಹ ಸಂಸ್ಕೃತಿಯನ್ನು ನಾವು ಭಾರತದಿಂದ ತೊಲಗಿಸುತ್ತೆವೆ. ಇದು ನಮ್ಮ ಕಾಂಗ್ರೆಸ್ ಮುಕ್ತ ಭಾರತದ ವ್ಯಾಖ್ಯಾನ ಎಂದರು.

ನಾನು ಹೋದಲೆಲ್ಲಾ ಜನರುಬದಲಾವಣೆ ಬೇಕಿದೆ ಎಂದು ಹೇಳುತ್ತಾರೆ. ಜನರು ಈಗಾಗಲೇ ಕಾಂಗ್ರೆಸ್ಸನ್ನು ಕಿತ್ತೆಸೆಯುವ ನಿರ್ಧಾರ ಮಾಡಿಕೊಂಡಿದ್ದಾರೆ. ಹೀಗಿದ್ದಾಗ ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ  ಎಂದು ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ಮನೆಕೆಲಸದವಳಿಗೆ ಲೈಂಗಿಕ ಕಿರುಕುಳ; ‘ಧುರಂದರ್’ ನಟ ನದೀಮ್ ಖಾನ್ ಬಂಧನ

77ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ, ಪರೇಡ್ ಆರಂಭ

SCROLL FOR NEXT