ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ರಾಜಕೀಯಕ್ಕೆ ರೆಡ್ಡಿ ಬ್ರದರ್ಸ್ ಮರುಪ್ರವೇಶದಿಂದ ಜನರು ಚಿಂತಿತರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ದೇಶದ ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದು, ಐಷಾರಾಮಿ ಜೀವನ ನಡೆಸುತ್ತಿರುವ ರೆಡ್ಡಿ ಬ್ರದರ್ಸ್ ರಾಜಕೀಯಕ್ಕೆ ಮರು ಪ್ರವೇಶ ಮಾಡುತ್ತಿರುವುದರಿಂದ ರಾಜ್ಯದ ಜನತೆ ಚಿಂತಿತರಾಗಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ...

ಯಾದಗಿರಿ; ದೇಶದ ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದು, ಐಷಾರಾಮಿ ಜೀವನ ನಡೆಸುತ್ತಿರುವ ರೆಡ್ಡಿ ಬ್ರದರ್ಸ್ ರಾಜಕೀಯಕ್ಕೆ ಮರು ಪ್ರವೇಶ ಮಾಡುತ್ತಿರುವುದರಿಂದ ರಾಜ್ಯದ ಜನತೆ ಚಿಂತಿತರಾಗಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. 
ಯಾದಗಿರಿಯ ಕಕ್ಕಾರಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜನಾರ್ಧನ ರೆಡ್ಡಿ ಹಾಗೂ ಅವರ ಗ್ಯಾಂಗ್ ರಾಜಕೀಯಕ್ಕೆ ಮರು ಪ್ರವೇಶ ಮಾಡುತ್ತಿರುವುದಕ್ಕೆ ಜನರು ಚಿಂತಿತರಾಗಿದ್ದಾರೆಂದು ಹೇಳಿದ್ದಾರೆ.
ಕೋಮುವಾದದ ಮೂಲಕ ಬಿಜೆಪಿ ಜನರನ್ನು ಒಡೆಯಲು ಯತ್ನ ನಡೆಸುತ್ತಿದ್ದು, ಬಾದಾಮಿ ಮತ್ತು ಇಲ್ಲಿನ ಜನರು ಬಿಜೆಪಿ ವಿರುದ್ಧ ಮತ ಹಾಕಲಿದ್ದಾರೆಂದು ತಿಳಿಸಿದ್ದಾರೆ. 
ಪಾರದರ್ಶಕ ಆಡಳಿತ ನೀಡುವುದರಲ್ಲಿ ಕಾಂಗ್ರೆಸ್ ಪಕ್ಷ ನಾಯಕರು ಹೆಸರು ಮಾಡಿದ್ದಾರೆ. ಜನರು ಕಾಂಗ್ರೆಸ್ ಪಕ್ಷಕ್ಕೇ ಮತ ಹಾಕಲಿದ್ದಾರೆಂಬ ವಿಶ್ವಾಸ ನನಗಿದೆ. ಸ್ಥಿರ ಸರ್ಕಾರಕ್ಕಾಗಿ ಜನರು ಕಾಂಗ್ರೆಸ್ ಗೆ ಮತ ಹಾಕಲಿದ್ದಾರೆ. 
2008ರಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ 5 ವರ್ಷಗಳಲ್ಲಿ ಮೂರು ಬಾರಿ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿತ್ತು. ಬಿಜೆಪಿ ನಾಯಕರ ಅಧಿಕಾರದ ದಾಹದ ಕುರಿತು ಜನರಿಗೆ ತಿಳಿದಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT