ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

5 ವರ್ಷದ ಅಧಿಕಾರದಲ್ಲಿ ವಿಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ರಾಜ್ಯಕ್ಕೆ ಕಾಂಗ್ರೆಸ್ ಏನೂ ಮಾಡಿಲ್ಲ: ಹೆಚ್.ಡಿ.ಕುಮಾರಸ್ವಾಮಿ

5 ವರ್ಷದ ಅಧಿಕಾರದಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ವಿರೋಧ ಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ಏನನ್ನೂ ಮಾಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...

ಶ್ರೀನಿವಾಸಪುರ; 5 ವರ್ಷದ ಅಧಿಕಾರದಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ವಿರೋಧ ಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ಏನನ್ನೂ ಮಾಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ. 
ಶ್ರೀನಿವಾಸಪುರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಅವರು, ಐದು ವರ್ಷದಲ್ಲಿ ಕಾಂಗ್ರೆಸ್ ರಾಜ್ಯಕ್ಕೆ ಏನನ್ನೂ ಮಾಡಿಲ್ಲ. ಆದರೆ, ರಾಜ್ಯದಲ್ಲಿ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವ್ಯಂಗ್ಯವಾಡಿದ್ದಾರೆ. 
ರಾಜ್ಯದಲ್ಲಿ ಹೊತ್ತಿ ಉರಿಯುತ್ತಿರುವ ವಿಚಾರಗಳು ಹಾಗೂ ಮಹಿಳೆಯರ ಭದ್ರತೆ ಸೇರಿದಂತೆ ಇನ್ನಿತರೆ ಸಮಸ್ಯೆಗಳನ್ನು ಇತ್ಯರ್ಥಪಡಿಸಲು, ಬಗೆಹರಿಸಲು ಜೆಡಿಎಸ್ ನಿಂದ ಮಾತ್ರ ಸಾಧ್ಯ. ದೇಶದ ಬೆನ್ನೆಲುಬಾಗಿರುವ ರೈತರನ್ನು ರಕ್ಷಣೆ ಮಾಡುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ ಎಂದು ತಿಳಿಸಿದ್ದಾರೆ. 
ಜೆಡಿಎಸ್ ಪಕ್ಷಕ್ಕೆ ಜನರು ಮತ ಹಾಕಿದ್ದೇ ಆದರೆ, ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲಗಳನ್ನು ಮನ್ನಾ ಮಾಡಲಾಗುತ್ತದೆ. ನೀರು ಸಮಸ್ಯೆ ಸೇರಿದಂದೆ ಇನ್ನಿತರೆ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ. ರಾಜ್ಯದಲ್ಲಿ ಬೆಳೆದ ಮಾವುಗಳನ್ನು ಇತರೆ ರಾಷ್ಟ್ರಗಳಿಗೆ ರಫ್ತು ಮಾಡಲು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ರೈತರ ಪ್ರತೀ ಕಣ್ಣೀರಿನ ಹನಿಯ ಬೆಲೆಯನ್ನು ಸಿದ್ದರಾಮಯ್ಯ ಸರ್ಕಾರಕ್ಕೆ ವಿವರಿಸಲಾಗುತ್ತದೆ. 5 ವರ್ಷಗಳ ಅಧಿಕಾರದಲ್ಲಿ ರಾಜ್ಯಕ್ಕೆ ಏನನ್ನೂ ಮಾಡದೆ, ವಿರೋಧ ಪಕ್ಷಗಳನ್ನು ಟೀಕಿಸಿದ್ದ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠವನ್ನು ಹೇಳಿಕೊಡಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT