ರೆಡ್ಡಿ-ಯಡ್ಡಿ 
ರಾಜಕೀಯ

ಯಡ್ಡಿ-ರೆಡ್ಡಿ ತಂಡ ಮತ್ತೆ ಕರ್ನಾಟಕವನ್ನು ಲೂಟಿ ಮಾಡಲು ಅಧಿಕಾರಕ್ಕೆ ಮರಳಲು ಯತ್ನ: ಕಾಂಗ್ರೆಸ್

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮತ್ತೆ ಕರ್ನಾಟಕವನ್ನು ಲೂಟಿ ಮಾಡಲು ಅಧಿಕಾರಕ್ಕೆ ಮರಳಲು ಯತ್ನಿಸುತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ...

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮತ್ತೆ ಕರ್ನಾಟಕವನ್ನು ಲೂಟಿ ಮಾಡಲು ಅಧಿಕಾರಕ್ಕೆ ಮರಳಲು ಯತ್ನಿಸುತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. 
ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸಿಎಂ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐನಿಂದ ಕ್ಲೀನ್ ಚೀಟ್ ಕೊಡಿಸಿದೆ. ಆ ಮೂಲಕ ಮತ್ತೊಮ್ಮೆ ಕರ್ನಾಟಕವನ್ನು ಲೂಟಿ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಆರೋಪಿಸಿದೆ. 
ಮಾಜಿ ಸಚಿವ ಜನಾರ್ದನ ರೆಡ್ಡಿ ಸಹೋದರರು ಹಾಗೂ ಸಂಬಂಧಿಗಳಿಗೆ 8 ಕ್ಷೇತ್ರಗಳ ಟಿಕೆಟ್ ನೀಡುವ ಮೂಲಕ 'ಸಾರ್ವಜನಿಕರ ಹಣ ಲೂಟಿ' ಮತ್ತು 'ನೈಸರ್ಗಿಕ ಸಂಪನ್ಮೂಲಗಳ ಲೂಟಿ' ಪ್ರಕರಣಗಳನ್ನು ಮುಚ್ಚಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ದುಷ್ಟ ಪಿತ್ತೂರಿ ಮಾಡಲಾಗಿದ್ದು ಇದನ್ನು ವಿವರಿಸುತ್ತಾರೆ ಎಂದು ಶುಕ್ಲಾ ಪ್ರಶ್ನಿಸಿದ್ದಾರೆ. 
ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಅವರು ಎಲ್ಲಾ ವಿಧದ ಆರೋಪಗಳನ್ನು ಎದುರಿಸುತ್ತಿದ್ದಾರೆ ಮತ್ತು ಭ್ರಷ್ಟಾಚಾರ ಆರೋಪಗಳ ಮೇಲೆ ಕೆಲವು ವರ್ಷಗಳ ಹಿಂದೆ ಪಕ್ಷದ ವಜಾ ಮಾಡಿದ್ದರಿಂದ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದರು. 
ಯಡ್ಡಿ ಮತ್ತು ರೆಡ್ಡಿ ತಂಡ ಕರ್ನಾಟಕ ರಾಜಕೀಯಕ್ಕೆ ಮತ್ತೆ ಮರಳಿದೆ. ಬಿಜೆಪಿಯ ಉನ್ನತ ನಾಯಕತ್ವಕ್ಕೆ ಧನ್ಯವಾದಗಳು. ಯಡ್ಡಿ ಮತ್ತು ರೆಡ್ಡಿ ತಂಡ ಮತ್ತೆ ಕರ್ನಾಟಕವನ್ನು ಆಳಲು ಬಯಸುತ್ತಾರೆ ಮತ್ತು ಅವರು ಕರ್ನಾಟಕ ರಾಜ್ಯದ ಅತ್ಯಮೂಲ್ಯ ಸ್ವತ್ತುಗಳನ್ನು ಲೂಟಿ ಮಾಡಲು ಬಯಸುತ್ತಾರೆ ಎಂದು ಶುಕ್ಲಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT