ಸಾಂದರ್ಭಿಕ ಚಿತ್ರ 
ರಾಜಕೀಯ

ಬದಲಾವಣೆ ಬಯಸುವ ಬೆಂಗಳೂರಿನ ಜನತೆ; ಹಕ್ಕು ಚಲಾಯಿಸಲು ಸಿದ್ಧ

ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಜನರು ಇತ್ತೀಚೆಗೆ ತಮ್ಮ ...

ಬೆಂಗಳೂರು: ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಜನರು ಇತ್ತೀಚೆಗೆ ತಮ್ಮ ಬೇಡಿಕೆಗಳನ್ನು ಮುಕ್ತವಾಗಿ ಹೇಳಿಕೊಳ್ಳುತ್ತಿದ್ದಾರೆ. ನಗರದ ಪರಿಸ್ಥಿತಿ, ಜನಪ್ರತಿನಿಧಿಗಳ ಆಡಳಿತದ ಬಗ್ಗೆ ಜನರು ಹೆಚ್ಚು ಗಮನ ನೀಡುತ್ತಿದ್ದಾರೆ. ಈ ಎಲ್ಲಾ ಅಂಶಗಳು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ.

ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವ ಸಾಧ್ಯತೆಯಿದೆ.
ಮೇ 12ರಂದು ಬೆಂಗಳೂರಿನ ಜನತೆ ತಮ್ಮ ಧ್ವನಿಯನ್ನು ಹೊರಹಾಕಲಿದ್ದಾರೆ.

ಸಮಸ್ಯೆಗಳಿರುವಾಗ ಸ್ಪಂದಿಸದಿರುವ ರಾಜಕೀಯ ಪ್ರತಿನಿಧಿಗಳಿಂದ ಬೇಸತ್ತಿರುವ ಜನರು ಈ ಬಾರಿ ಕಡ್ಡಾಯವಾಗಿ ಮತ ಚಲಾಯಿಸಲು ಮುಂದಾಗಿದ್ದಾರೆ ಎನ್ನುತ್ತಾರೆ ಜಯನಗರ ನಿವಾಸಿ ಅಭಯ್ ಬಿ.ಕೆ.

ಹಿಂದಿನ ಅಂಕಿಅಂಶಗಳಿಗೆ ಹೋಲಿಸಿದರೆ 2008ರಿಂದ 2013ಕ್ಕೆ ಬೆಂಗಳೂರು ನಗರದಲ್ಲಿ ಮತದಾರರ ಸಂಖ್ಯೆ ಶೇಕಡಾ 7.51ರಷ್ಟು ಹೆಚ್ಚಾಗಿದೆ. ಈ ಬಾರಿ ಸಹ ಹಲವು ಸಂಘಟನೆಗಳು ಮತ್ತು ಒಕ್ಕೂಟಗಳು. ನಾವು ಮತದಾನಕ್ಕಾಗಿ ಕಳೆದ ಫೆಬ್ರವರಿಯಿಂದ ಸಿದ್ಧರಾಗುತ್ತಿದ್ದೇವೆ ಎನ್ನುತ್ತಾರೆ ಕೆಂಗೇರಿಯ ನಿವಾಸಿಗಳ ಅಭಿವೃದ್ಧಿ ಒಕ್ಕೂಟದ(ಆರ್ ಡಬ್ಲ್ಯುಎ)ದ ಸದಸ್ಯರೊಬ್ಬರು.

ಬೆಂಗಳೂರು ಗ್ರಾಮಾಂತರ ಪ್ರದೇಶಕ್ಕೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಮತದಾರರ ಸಂಖ್ಯೆ ಕಡಿಮೆಯೆನ್ನಬಹುದು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಶೇಕಡಾ 82ರಷ್ಟು ಮತದಾನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT