ಜಿಗ್ನೇಶ್ ಮೆವಾನಿ 
ರಾಜಕೀಯ

ನನ್ನ ಜೊತೆ ನಾಲ್ಕು ನಿಮಿಷ ಚರ್ಚೆಗೆ ಬನ್ನಿ: ಪ್ರಧಾನಿ ಮೋದಿಗೆ ಜಿಗ್ನೇಶ್ ಮೆವಾನಿ ಆಹ್ವಾನ

ತಮ್ಮ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಮಾಡಿರುವ ಸಾಧನೆ ಬಗ್ಗೆ ನಾಲ್ಕು ನಿಮಿಷಗಳ ಕಾಲ ...

ಮೈಸೂರು: ತಮ್ಮ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಮಾಡಿರುವ ಸಾಧನೆ ಬಗ್ಗೆ ನಾಲ್ಕು ನಿಮಿಷಗಳ ಕಾಲ ಚರ್ಚೆಯಲ್ಲಿ ಭಾಗವಹಿಸುವಂತೆ ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ನಿನ್ನೆ ಸುದ್ದಿಗಾರಗೊಂದಿಗೆ ಸಂವಾದ ನಡೆಸಿದ ಅವರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯವರಿಗೆ ಈ ರೀತಿ ಚರ್ಚೆಗೆ ಬರುವಂತೆ ಆಹ್ವಾನಿಸಿದ ಬಳಿಕ ತಾವು ಕೂಡ ಪ್ರಧಾನಿಗೆ ಸವಾಲು ಹಾಕಿದ್ದಾರೆ.

ಇತ್ತೀಚೆಗೆ ಪ್ರಧಾನಿಯವರು ರಾಜ್ಯದಲ್ಲಿ ಮಾಡಿರುವ ಭಾಷಣದಲ್ಲಿ ವಿಷಯಗಳಿರಲಿಲ್ಲ ಎಂದು ಹೇಳಿದ ಮೋದಿ, ಹಿಮಾಲಯಕ್ಕೆ ಹೋಗಿ ಅಲ್ಲಿ ನೆಲೆಸುವ ಸಮಯ ಪ್ರಧಾನಿಯವರಿಗೆ ಈಗ ಪ್ರಶಸ್ತವಾಗಿದೆ. ಮೋದಿಯವರು ನಿರುದ್ಯೋಗ ಸಮಸ್ಯೆ, ಸಮಸ್ಯೆಗಳಿಂದ ರೈತರನ್ನು ಪಾರು ಮಾಡುವುದು ಹೇಗೆ, ದಲಿತರ ವಿರುದ್ಧ ಹಲ್ಲೆ, ಗಲಭೆಗಳನ್ನು ನಿಯಂತ್ರಿಸುವುದು ಮತ್ತು ನಿರಾಶ್ರಿತರಿಗೆ ವರ್ಷಕ್ಕೆ 30ರಿಂದ 40 ಲಕ್ಷ ಮನೆ ಒದಗಿಸಿಕೊಡುವುದು ಇತ್ಯಾದಿ ವಿಷಯಗಳ ಕುರಿತು ಮಾತನಾಡಬೇಕು ಎಂದರು.

ಜಿಎಸ್ ಟಿಯ ಜಾರಿ ಮತ್ತು ನೋಟುಗಳ ಅಮಾನ್ಯತೆ ದೇಶದ ಆರ್ಥಿಕತೆ ಮೇಲೆ ಭಾರೀ ಹೊಡೆತವನ್ನುಂಟುಮಾಡಿದ್ದು, ಸರ್ಕಾಕ ಕೈಗಾರಿಕಾ ಕಾಯ್ದೆ ಮೂಲಕ ದೇಶದ ಮೇಲೆ ಕೆಟ್ಟ ಪ್ರಭಾವ ಬೀರಿದೆ. ಇದರಿಂದ ಉದ್ಯೋಗ ಸೃಷ್ಟಿ ಕೂಡ ಕುಂಠಿತವಾಗಿದೆ ಎಂದು ಟೀಕಿಸಿದರು.

ಬಿಜೆಪಿ ಮತ್ತು ಆರ್ ಎಸ್ಎಸ್ ಕೋಮುವಾದ ಮತ್ತು ಬಲಪಂಥೀಯವಾದವಾಗಿರುವ ಬಿಜೆಪಿ ಮತ್ತು ಆರ್ ಎಸ್ಎಸ್ ತಾವು ಯಾವುದೇ ರಾಜಕೀಯ ಪಕ್ಷಗಳ ಪರವಾಗಿಲ್ಲ. ತಾವು ಪ್ರತಿ ನಾಗರಿಕ ಚಳವಳಿಯನ್ನು ಪ್ರೋತ್ಸಾಹಿಸುವುದಾಗಿ ಮೆವಾನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT