ಡಾ. ಜಿ. ಪರಮೇಶ್ವರ್ ಸುದ್ದಿಗೋಷ್ಠಿ 
ರಾಜಕೀಯ

ಆಧಾರವಿಲ್ಲದ ಆರೋಪದ ಮೂಲಕ ಮೋದಿ, ಬಿಜೆಪಿ ಬೆಂಗಳೂರು ಜನತೆಗೆ ಅಪಮಾನ - ಡಾ. ಜಿ. ಪರಮೇಶ್ವರ್

ಆಧಾರವಿಲ್ಲದ ಆರೋಪ ಮಾಡುವ ಮೂಲಕ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ನಾಯಕರು ಬೆಂಗಳೂರು ಜನತೆಯನ್ನು ಅಪಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು : ಆಧಾರವಿಲ್ಲದ ಆರೋಪ ಮಾಡುವ ಮೂಲಕ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ನಾಯಕರು  ಬೆಂಗಳೂರು ಜನತೆಯನ್ನು ಅಪಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್  ವಾಗ್ದಾಳಿ ನಡೆಸಿದ್ದಾರೆ.

 ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಬೆಂಗಳೂರು ಡೈನಾಮಿಕ್ ಸಿಟಿ ಎಂದು ಇಡೀ ವಿಶ್ವದಲ್ಲಿಯೇ   ಖ್ಯಾತಿ ಪಡೆದಿದೆ. ಅದನ್ನು ಹೊಗಳುವ ಬದಲು ಪ್ರಧಾನಿ ಮೋದಿ  ಸಿನ್ ಸಿಟಿ ಎಂದು ಕರೆಯುವ ಮೂಲಕ ಅದರ ಖ್ಯಾತಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.

ಉನ್ನವೋ ಹಾಗೂ ಕಥುವಾ  ಸಂತ್ರಸ್ತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಡೆಯುವ ಹೋರಾಟವನ್ನು ಪ್ರಧಾನಿ ನರೇಂದ್ರಮೋದಿ ಹೇಗೆ ಖಂಡಿಸುತ್ತಾರೆ.  ನ್ಯಾಯಕ್ಕಾಗಿ ಬೇಡಿಕೆ ಸಲ್ಲಿಸಬಾರದೇ , ಇದು ಮಹಿಳೆಯರ ರಕ್ಷಣೆಯಲ್ಲಿ ಪ್ರಧಾನಿ ಅವರ ಮನೋಸ್ಥಿತಿಯನ್ನು ತೋರಿಸುತ್ತದೆ ಎಂದರು.

ಪರಿಶಿಷ್ಟ ಜಾತಿ, ಪಂಗಡಕ್ಕೆ ನೀಡಿರುವ ಮೀಸಲಾತಿಯನ್ನು ವಿರೋಧಿಸುವುದಾಗಿ ಆರ್ ಎಸ್ ಎಸ್ ಮುಖ್ಯಸ್ಥರು ಹೇಳುತ್ತಾರೆ. ಪರಿಶಿಷ್ಟ ಜಾತಿ, ಪಂಗಡದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸುವ ಮೂಲಕ ಬಿಜೆಪಿ ತನ್ನ ನಿಲುವು ಏನೆಂಬುದನ್ನು ತೋರಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯನ್ನು  ಲೋಕಸಭೆಯಲ್ಲಿನ  ಪ್ರತಿಪಕ್ಷಗಳ ಸಮರ್ಥ ನಾಯಕ ಎಂಬುದನ್ನು ಮೋದಿ ಒಪ್ಪಿಕೊಳ್ಳಲ ಎಂದರು.

 ರಾಜ್ಯದಲ್ಲಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಪರ   ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಮತ್ತೆ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿರುವುದಾಗಿ ಪರಮೇಶ್ವರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT