ನರೇಂದ್ರಮೋದಿ 
ರಾಜಕೀಯ

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ನೀಡುವುದು ಬಿಜೆಪಿ ಉದ್ದೇಶ: ಪ್ರಧಾನಿ ಮೋದಿ

ಸಬ್ಕಾ ಸಾಥ್ ಸಬ್ಕಾ ವಿಕಾಸ್ ನಮ್ಮ ಧ್ಯೇಯವಾಗಿದ್ದು,ರಾಷ್ಟ್ರಕವಿ ಕುವೆಂಪು ಅವರ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಉದ್ದೇಶದೊಂದಿಗೆ ನಡಿಯುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಶಿವಮೊಗ್ಗ : ಸಬ್ಕಾ ಸಾಥ್ ಸಬ್ಕಾ ವಿಕಾಸ್ ನಮ್ಮ ಧ್ಯೇಯವಾಗಿದ್ದು,ರಾಷ್ಟ್ರಕವಿ ಕುವೆಂಪು ಅವರ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಉದ್ದೇಶದೊಂದಿಗೆ  ನಡಿಯುತ್ತಿದ್ದೇವೆ  ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿಂದು ಬಿಜೆಪಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ನರೇಂದ್ರಮೋದಿ  , ಬಿಜೆಪಿ ಸಮಾಜದ ಪ್ರತಿ ವರ್ಗಕ್ಕೂ ಸೇವೆ ಸಲ್ಲಿಸುವ ಪ್ರಯತ್ನ ಮಾಡುತ್ತಿದೆ. ಆದರೆ,  ಕಾಂಗ್ರೆಸ್  ಬ್ರಿಟೀಷರ ಹಾಗೆ ಒಡೆದು ಆಳುವ ನೀತಿಗೆ ಬದ್ದವಾಗಿದೆ ಎಂದು ಆರೋಪಿಸಿದರು.

ಧರ್ಮದ ಆಧಾರದ ಮೇಲೆ ಅಪರಾಧವನ್ನು ತೀರ್ಮಾನಿಸುವ ಮಟ್ಟಕ್ಕೆ ಹೋಗಿರುವ ಕಾಂಗ್ರೆಸ್ ನ ವಿಭಜನಾಕಾರಿ ತಂತ್ರ ಸರಿಯೇ? ಅಪರಾಧಗಳಲ್ಲೂ ಧರ್ಮ, ಜಾತಿ, ಸಂಪ್ರದಾಯಗಳನ್ನು ಹುಡುಕುವ ಕೀಳುಮಟ್ಟಕ್ಕೆ ಇಳಿದಿರುವ ಇಲ್ಲಿನ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲೇಬೇಕಿದೆ ಎಂದರು.

ಕಾಂಗ್ರೆಸ್ ಸಿ ಆಕ್ಷರದಿಂದ ಆರಂಭವಾಗುತ್ತದೆ. Corruption ಸಹ ಸಿ ಅಕ್ಷರದಿಂದ  ಆರಂಭವಾಗುತ್ತದೆ. ಇವರೆಡರ ನಡುವೆ ಸಾಮತ್ಯೆ ಇದ್ದು, ಮಂತ್ರಿಗಳೆಲ್ಲಾ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಕೋಟಿ ಕೋಟಿ ಲಪಾಟಾಯಿಸಿದ್ದಾರೆ ಎಂದು ಆರೋಪಿಸಿದರು.

.ಸಚಿವರೊಬ್ಬರ ಆಸ್ತಿ ಮೊತ್ತ 5 ವರ್ಷಗಳಲ್ಲಿ 800 ಕೋಟಿ ಆಗಿದೆ. ಅವರ  ಮನೆ, ಕೋಣೆ, ಬಾತ್ ರೊನಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. ಇದು ಹೇಗೆ ಬಂತು ಎಂದು ಪ್ರಶ್ನಿಸಿದ ಅವರು, ಹಣದ ಮೇಲೆ ಕುಳಿತು ಸಿಎಂ ಆಗುವ ಕನಸು ಕಾಣುತ್ತಿದ್ದರು, ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ಟಿಕೆಟ್ ಬಗ್ಗೆ ಮಾತನಾಡುತ್ತಾರೆ ಎಂದರು.

ಕರ್ನಾಟಕದಲ್ಲಿ ಅಭಿವೃದ್ದಿಗೆ ಎಲ್ಲಾ ರೀತಿಯ ಅವಕಾಶವಿದೆ.  ಈ ಅವಕಾಶ ಬಳಕಿಸಿಕೊಂಡು  ಎಲ್ಲಾ ಕ್ಷೇತ್ರಗಳ ಅಭಿವೃದ್ದಿಪಡಿಸಬೇಕಾಗಿದೆ. ಮೇ 15 ರ ನಂತರ ಯಡಿಯೂರಪ್ಪ ನೇತೃತ್ವದಲ್ಲಿ  ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT