ಅಮಿತ್ ಶಾ 
ರಾಜಕೀಯ

ಬಿಜೆಪಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥ: ಅಮಿತ್ ಶಾ ಭರವಸೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿ...

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆರು ತಿಂಗಳಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ. 
ಸವದತ್ತಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಆನಂದ ಮಾಮನಿ ಪರ ಪ್ರಚಾರ ಸಭೆಯಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. 
ಇನ್ನು ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಗದಗದಲ್ಲಿನ ಬಿಜೆಪಿ ಸಮಾವೇಶದಲ್ಲಿ ಮಹದಾಯಿ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರು. 
ಇನ್ನು ಇದೇ ಮೊದಲ ಬಾರಿಗೆ ಮಹದಾಯಿ ಸಮಸ್ಯೆ ಕುರಿತು ಪ್ರಸ್ತಾಪಿಸಿರುವ ಅಮಿತ್ ಶಾ ಮಹದಾಯಿ ವಿಷಯ ಆರು ತಿಂಗಳಲ್ಲಿ ಬಗೆಹರಿಸುವುದಾಗಿ ಭರವಸೆ ನೀಡುವ ಮೂಲಕ ಮಲಪ್ರಭೆ ನದಿ ತೀರದ ಮತದಾರರನ್ನು ಸೆಳೆಯಲು ಯತ್ನಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT