ರಾಮಲಿಂಗಾ ರೆಡ್ಡಿ 
ರಾಜಕೀಯ

ಪ್ರಧಾನಿ ಮೋದಿಯವರ ಮಾತುಗಳು ಚೀನಾದ ವಸ್ತುಗಳಂತೆ; ಅದಕ್ಕೆ ಗ್ಯಾರಂಟಿಯಿಲ್ಲ: ರಾಮಲಿಂಗಾ ರೆಡ್ಡಿ ಆರೋಪ

ನಗರವನ್ನು ಕ್ರೈಮ್ ಸಿಟಿ ಎಂದು ಕರೆದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿಕೆಗೆ ಗೃಹ ಸಚಿವ ....

ಬೆಂಗಳೂರು: ನಗರವನ್ನು ಕ್ರೈಮ್ ಸಿಟಿ ಎಂದು ಕರೆದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿಕೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಸುಳ್ಳು ಹೇಳುತ್ತಿದ್ದಾರೆ. ಚೀನಾದ ವಸ್ತುಗಳಂತೆ ಮೋದಿಯವರ ಮಾತಿಗೆ ಯಾವುದೇ ಗ್ಯಾರಂಟಿಯಾಗಲಿ, ವ್ಯಾರಂಟಿಯಾಗಲಿ ಇಲ್ಲ ಎಂದರು.

ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಪ್ರದೇಶದಂತಹ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂದು ಅಪರಾಧ ಪ್ರಮಾಣ ಜಾಸ್ತಿಯಾಗಿದೆ. ಆದರೆ ಬಿಜೆಪಿ ನಾಯಕರು ಕರ್ನಾಟಕದ ಕಾನೂನು, ಸುವ್ಯವಸ್ಥೆ ಬಗ್ಗೆ ಮಾತನಾಡುತ್ತಿದೆ. ಮೋದಿಯವರು ಮೊಹಮ್ಮದ್ ನಲಪಾಡ್ ವಿಷಯದ ಬಗ್ಗೆ ಮಾತನಾಡುತ್ತಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಜೊತೆ ಸಹಯೋಗ ಹೊಂದಿದವರ ಮೇಲೆ ಅತ್ಯಾಚಾರ ಆರೋಪಗಳು ಕೇಳಿಬಂದಿವೆ. ಒಂದು ಪ್ರಕರಣದಲ್ಲಿ ಅತ್ಯಾಚಾರಕ್ಕೊಳಗಾದ ಬಾಲಕಿಯ ತಂದೆಯನ್ನು ಪೊಲೀಸ್ ಕಸ್ಟಡಿಯಲ್ಲಿ ಹತ್ಯೆ ಮಾಡಲಾಯಿತು ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಬೆಂಗಳೂರು ಅಭಿವೃದ್ಧಿಗೆ ಮೋದಿಯವರ ಕೊಡುಗೆಯೇನು ಎಂದು ಅವರು ಪ್ರಶ್ನಿಸಿದರು. ಬೆಂಗಳೂರು ನಗರದ ಅಭಿವೃದ್ಧಿಗೆ ಬಿಜೆಪಿಯ ಕಾಣಿಕೆಯೇನಿದೆ? ಮೆಟ್ರೊ ರೈಲು ಯೋಜನೆಗಳಂತಹ ಎಲ್ಲಾ ಅಭಿವೃದ್ಧಿಪರ ಯೋಜನೆಗಳು ಕಾಂಗ್ರೆಸ್ ಸರ್ಕಾರದಲ್ಲಿ ಆಗಿದೆ. ನಗರದ ಅಭಿವೃದ್ಧಿಗೆ ಬಿಜೆಪಿ ಏನೂ ಮಾಡಿಲ್ಲ ಎಂದು ದೂಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT