ಯಡಿಯೂರಪ್ಪ 
ರಾಜಕೀಯ

ರೆಡ್ಡಿ ಸಹೋದರರಿಗೆ ಬಿಜೆಪಿ ಟಿಕೆಟ್ : ಯಡಿಯೂರಪ್ಪ ಕೊಟ್ಟ ಸಮರ್ಥನೆ ಏನು ಗೊತ್ತಾ?

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗಣಿ ದಣಿಗಳಿಗೆ ಹಾಗೂ ಅವರ ಆಪ್ತರಿಗೆ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಸಮರ್ಥನೆ ...

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗಣಿ ದಣಿಗಳಿಗೆ ಹಾಗೂ ಅವರ ಆಪ್ತರಿಗೆ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಸಮರ್ಥನೆ ನೀಡಿದ್ದಾರೆ
ಪ್ರತಿಯೊಂದು ವಿಧಾನಸಭೆ ಕ್ಷೇತ್ರದಲ್ಲಿ ಗೆಲ್ಲುವುದು ನಮಗೆ ಮಹತ್ವವಾಗಿದೆ ಹೀಗಾಗಿ , ದಾವಣಗೆರೆಯ ಹರಪ್ಪನಹಳ್ಳಿಯಿಂದ ಕರುಣಾಕರ ರೆಡ್ಜಿಗೆ. ಬಳ್ಳಾರಿ ನಗರದಿಂದ ಸೋಮಶೇಖರ ರೆಡ್ಜಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.
ಶ್ರೀರಾಮುಲು ಸೇರಿದಂತೆ ಬಳ್ಳಾರಿಯ ಮಾಜಿ ಮತ್ತು ಹಾಲಿ ಶಾಸಕರು ನಮ್ಮೊಂದಿಗಿದ್ದಾರೆ, ಅದರಲ್ಲಿ ಇಬ್ಬರು ಪಕ್ಷ ತೊರೆದಿದ್ದಾರೆ, ಉಳಿದವರಿಗೆ ಟಿಕೆಟ್ ನೀಡಲಾಗಿದೆ. ಅವರೆಲ್ಲಾ ಖಚಿವಾಗಿ ಗೆಲ್ಲುತ್ತಾರೆ, ನಮಗೆ ಗೆಲ್ಲುವುದಷ್ಟೇ ನಮಗೆ ಮುಖ್ಯ ಎಂದು ಹೇಳಿದ್ದಾರೆ.
ಜನಾರ್ಧನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಕೋರ್ಟ್ ತಡೆ ನೀಡಿದೆ. ಬೆಂಗಳೂರಿನ  ಪ್ರೆಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ಮಾಧ್ಯಮ ಸಂವಾದಲ್ಲಿ ಮಾತನಾಡಿದ ಯಡಿಯೂರಪ್ಪ ಹಿಂದಿನದನ್ನು ನಾನು ಮರೆತಿಲ್ಲ ಎಂದಿದ್ದಾರೆ,ರೆಡ್ಡಿ ಸಹೋದರರ ಹಿಂದಿವ ಘಟನೆಗಳನ್ನು ನಾನು ಮರೆಯುವುದಿಲ್ಲ, ಭವಿಷ್ಯದಲ್ಲಿ ಎಚ್ಚರಿಕೆಯಿಂದಿರುತ್ತೇನೆ. ನಾನು ಸಿಎಂ ಆಗಿದ್ದ ಅವಧಿಯಲ್ಲಿ ನಡೆದದ್ದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಬೇಲ್ ಗಾಗಿ ಲಂಚ ಪ್ರಕರಣದಲ್ಲಿ ಸೋಮಶೇಖರ್ ರೆಡ್ಡಿ ವಿರುದ್ಧ ಜಡ್ಜ್ ಗೆ ಲಂಚ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಬೇಲ್ ಡೀಲ್ ಪ್ರಕರಣದಲ್ಲಿ ನಾನು ವಿರುದ್ಧದ ಆರೋಪ ಸುಳ್ಳು ಎಂದು ಹೇಳಿದ್ದಾರೆ.  ಸೋಮಶೇಖರ್ ರೆಡ್ಡಿ ಸದ್ಯ ಜಾಮೀನನ ಮೇಲೆ ಹೊರಗಿದ್ದಾರೆ,
ಈ ಸಂಬಂಧ ಸಿಎಂ ಅವರನ್ನು ಪ್ರಶ್ನಿಸಿರುವ ಸಿದ್ದರಾಮಯ್ಯ ಆನಂದ್ ಸಿಂಗ್ ಅವರ ವಿರುದ್ಧವೂ ಕೇಸ್ ಗಳಿವೆ, ಹಾಗಿದ್ದರೂ ಸಿಎಂ ಏಕೆ ಅವರಿಗೆ ಟಿಕೆಟ್ ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ,
ಸಾರ್ವಜನಿಕವಾಗಿ ಬಿಜೆಪಿ ಜನಾರ್ದನ ರೆಡ್ಡಿಯೊಂದಿಗೆ ಅಂತರ ಕಾಯ್ದುಕೊಂಡಿದ್ದೇವೆ, ಜನಾರ್ದನ ರೆಡ್ಡಿ ಅವರ ಜೊತೆ ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಹೇಳಿಕೆಗೂ ಮುನ್ನ ಜನಾರ್ದನ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾಗಿ ತಿಳಿಸಿದರು. 
ರೆಡ್ಡಿ ಸಹೋದರರ ವಿರುದ್ಧ ಇದ್ದ ಆರೋಪಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT