ಕೆ.ಜೆ.ಜಾರ್ಜ್ 
ರಾಜಕೀಯ

ಸರ್ವಜ್ಞನಗರ: ಅಭಿವೃದ್ಧಿಪರ ಕೆಲಸಗಳಿಗೆ ಮತದಾರರ ಆದ್ಯತೆ, ಪೈಪೋಟಿ ಅನಂತರ

ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಪ್ರತಿನಿಧಿಸುತ್ತಿರುವ ಸರ್ವಜ್ಞನಗರ ತೀವ್ರ ಜಿದ್ದಾಜಿದ್ದಿನ ...

ಬೆಂಗಳೂರು: ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಪ್ರತಿನಿಧಿಸುತ್ತಿರುವ ಸರ್ವಜ್ಞನಗರ ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿದೆ. ಕ್ಷೇತ್ರದ 3.34 ಲಕ್ಷ ಮತದಾರರು ಮುಂದಿನ ಶಾಸಕ ಯಾರಾಗುತ್ತಾರೆ ಎಂಬುದನ್ನು ನಿರ್ಧರಿಸಲಿದ್ದಾರೆ.

ಆಪ್ ಪಕ್ಷದಿಂದ ಪೃಥ್ವಿ ರೆಡ್ಡಿ, ಕಾಂಗ್ರೆಸ್ ನಿಂದ ಕೆ.ಜೆ.ಜಾರ್ಜ್, ಬಿಜೆಪಿಯಿಂದ ಮುನಿನಾಗ ರೆಡ್ಡಿ ಮತ್ತು ಜೆಡಿಎಸ್ ನಿಂದ ಅನ್ವರ್ ಶರೀಫ್ ನಿಂತಿದ್ದಾರೆ. ಹಿಂದಿನ ಬಿಜೆಪಿ ಅಭ್ಯರ್ಥಿ ಪದ್ಮನಾಭ ರೆಡ್ಡಿಯವರ ಬದಲಿಗೆ ಎಂ.ಎನ್.ರೆಡ್ಡಿಯನ್ನು ಬಿಜೆಪಿ ಸ್ಪರ್ಧಾಕಣಕ್ಕಿಳಿಸಿದ್ದು ಇವರು ಕ್ಷೇತ್ರದಲ್ಲಿ ಅಷ್ಟೊಂದು ಚಿರಪರಿಚಿತರಲ್ಲ. ಇನ್ನು ಇವರ ವಿರುದ್ಧ ನಾಲ್ಕು ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದು ಅದು ಕೂಡ ಮುಳುವಾಗುವ ಸಾಧ್ಯತೆಯಿದೆ.

ನಗರಾಭಿವೃದ್ಧಿ ಸಚಿವರಾಗಿ ಕೆ.ಜೆ.ಜಾರ್ಜ್ ಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಹೊಸ ಮೂಲಭೂತ ಸೌಕರ್ಯಗಳನ್ನು ಆರಂಭಿಸಿದ್ದಕ್ಕೆ ಕೆಲವರು ಜಾರ್ಜ್ ಅವರನ್ನು ಹೊಗಳುತ್ತಿದ್ದರೆ ಇನ್ನು ಕೆಲವರು ಸ್ಟೀಲ್ ಮೇಲ್ಸೇತುವೆಯಂತಹ ಯೋಜನೆಗಳಿಗೆ ಪ್ರತಿಭಟನೆ ವ್ಯಕ್ತವಾಗಿದೆ. ಸರ್ವಜ್ಞನಗರದಲ್ಲಿ ಹಲವರಿಗದೆ ಜಾರ್ಜ್ ಅವರ ಮೇಲೆ ವಿಶ್ವಾಸವಿದೆ, ಇದಕ್ಕೆ ಅವರು ಕೈಗೊಂಡಿರುವ ಅಭಿವೃದ್ಧಿಪರ ಮೂಲಭೂತ ಸೌಕರ್ಯಗಳು ಕಾರಣವಾಗಿದೆ.
 
ಸಂಪೂರ್ಣವಾಗದಿರುವ ವೈಟ್ ಟಾಪಿಂಗ್ ಕೆಲಸಗಳಿಂದ ಸಂಚಾರ ದಟ್ಟಣೆ ಸಮಸ್ಯೆ ಇನ್ನೂ ಹಾಗೆಯೇ ಉಳಿದಿದ್ದು ಮೂಲಭೂತ ಸೌಕರ್ಯಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂಬ ನೋವು ಜಾರ್ಜ್ ಅವರ ಮೇಲೆ ಹಲವರಿಗಿದೆ.

ನಾಗರಿಕ ಸಮಸ್ಯೆಗಳ ಬಗ್ಗೆ ಆಸಕ್ತಿ ಹೊಂದಿರುವ ಪೃಥ್ವಿ ಅವರಿಗೆ ಕ್ಲೀನ್ ಇಮೇಜ್ ಇದೆ. ಆದರೆ ಸರ್ವಜ್ಞನಗರ ಜನತೆಗೆ ಪೃಥ್ವಿ ಅವರ ಬಗ್ಗೆ ಅಷ್ಟು ಪರಿಚಯವಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT