ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ರಾಹುಲ್ ಗಾಂಧಿ 
ರಾಜಕೀಯ

ಬ್ಯಾಂಕ್ ನಲ್ಲಿರುವ ಶೇ.90ರಷ್ಟು ಹಣ ಕೇವಲ 15 ಶ್ರೀಮಂತ ಉದ್ಯಮಿಗಳ ಜೇಬಿಗೆ: ರಾಹುಲ್

ಬ್ಯಾಂಕ್ ನಲ್ಲಿ ಜಮೆಯಾಗುವ ಶೇ.90ರಷ್ಟು ಹಣ ಕೇವಲ 15 ಶ್ರೀಮಂತ ಉದ್ಯಮಿಗಳ ಜೇಬು ಸೇರುತ್ತಿದೆ ಎಂದು ಕಾಂಗ್ರೆಸ್...

ಬೆಂಗಳೂರು: ಬ್ಯಾಂಕ್ ನಲ್ಲಿ ಜಮೆಯಾಗುವ ಶೇ.90ರಷ್ಟು ಹಣ ಕೇವಲ 15 ಶ್ರೀಮಂತ ಉದ್ಯಮಿಗಳ ಜೇಬು ಸೇರುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.
ಇಂದು ನಗರದಲ್ಲಿ ಗಾರ್ಮೆಂಟ್ ಉದ್ಯಮದ ಮಹಿಳೆಯರೊಂದಿಗೆ ಸಂವಾದ ನಡೆಸಿದ ರಾಹುಲ್ ಗಾಂಧಿ, ಬ್ಯಾಂಕ್ ನಲ್ಲಿರುವ ಎಲ್ಲಾ ಹಣ ದೊಡ್ಡ ದೊಡ್ಡ ಉದ್ಯಮಿಗಳ ಪಾಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಕಂಪನಿಗಳಿಗೆ ಯಾವುದೇ ಹಣ ಸಿಗುತ್ತಿಲ್ಲ ಎಂದರು.
ಬ್ಯಾಂಕ್ ಗಳಿಗೆ 35 ಸಾವಿರ ಕೋಟಿ ರುಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ನೀರವ್ ಮೋದಿ ಯಾರಿಗೂ ಉದ್ಯೋಗ ನೀಡಿಲ್ಲ. ಆದರೆ ಅದೇ ಹಣ ನಿಮ್ಮಂತಹ ಸಣ್ಣ ಮತ್ತು ಮಧ್ಯಮ ಕಂಪನಿಗಳಿಗೆ ನೀಡಿದ್ದರೆ ಸಾವಿರಾರು ಜನರಿಗೆ ಉದ್ಯೋಗ ಸಿಗುತ್ತಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಹೇಳಿದರು.
ಗಣಿ ಮಾಫಿಯಾದ ರೆಡ್ಡಿ ಸಹೋದರರು ಸಹ 35 ಸಾವಿರ ಕೋಟಿ ರುಪಾಯಿ ಕೊಳ್ಳೆ ಹೊಡೆದಿದ್ದಾರೆ. ಆ ಹಣದಲ್ಲೂ ಸಾವಿರಾರು ಉದ್ಯೋಗ ಸೃಷ್ಟಿಸಬಹುದಿತ್ತು ಎಂದರು.
ಸಬ್ಸಿಡಿ ಮತ್ತು ಸೂಕ್ತ ಸಾಲ ಸೌಲಭ್ಯ ಇಲ್ಲದೆ ಹಲವು ಸಣ್ಣ ಪುಟ್ಟಗಾರ್ಮೆಂಟ್ ಫ್ಯಾಕ್ಟರಿಗಳು ಬಾಂಗ್ಲಾದೇಶಕ್ಕೆ ಸ್ಥಳಾಂತರಗೊಂಡಿವೆ. ಏಕೆಂದರೆ ಅಲ್ಲಿ ಸ್ಪರ್ಧೆ ಇಲ್ಲ ಮತ್ತು ಸಬ್ಸಿಡಿ ಸಿಗುತ್ತದೆ ಎಂದರು. ಅಲ್ಲದೆ ಜಿಎಸ್ ಟಿ ಮತ್ತು ನೋಟ್ ನಿಷೇಧ ಹಲವು ಗಾರ್ಮೆಂಟ್ ಫ್ಯಾಕ್ಟರಿಗಳು ಮುಚ್ಚಲು ಮತ್ತೊಂದು ಕಾರಣ ಎಂದು ಆರೋಪಿಸಿದರು.
ದೇಶದಲ್ಲಿ ಉದ್ಯೋಗದ್ದೇ ದೊಡ್ಡ ಸಮಸ್ಯೆಯಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಕೋಟ್ಯಾಂತರ ಉದ್ಯೋಗ ಸೃಷ್ಟಿ ಮಾಡುವುದಾಗಿ ಈಗಗಾಲೇ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಪ್ರತಿ ಖಾತೆಗೆ 15 ಲಕ್ಷ ರುಪಾಯಿ ಹಾಕುತ್ತೇನೆ ಅಂದವರು ನಿಮ್ಮ ಜೇಬಿನಲ್ಲಿದ್ದ ಚಿಲ್ಲರೆ ಹಣವನ್ನೂ ಕಿತ್ತು ನೀರವ್ ಮೋದಿಗೆ ಕೊಟ್ಟರು ಎಂದು ದೂರಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Kurnool Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: 21 ಮಂದಿ ಸಜೀವ ದಹನ-Video

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಭಾರತದ ನಂತರ ಇದೀಗ ಅಪ್ಘಾನಿಸ್ತಾನದಿಂದಲೂ 'ಜಲಬಾಂಬ್': ಪಾಕಿಸ್ತಾನ ವಿಲವಿಲ!

Kurnool Bus Fire: ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನ!

'ಅಹಿಂದ ಕಿರೀಟ'ಕ್ಕಾಗಿ ಕಚ್ಚಾಟ; ಸಿದ್ದರಾಮಯ್ಯ ಸೈದ್ಧಾಂತಿಕ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಿತ್ತಾಟ! ಒಳಗೊಳಗೆ ಖರ್ಗೆ ಕೊತ-ಕೊತ?

SCROLL FOR NEXT