ಕೃಷ್ಣ ಬೈರೇಗೌಡ 
ರಾಜಕೀಯ

ಬ್ಯಾಟರಾಯನಪುರ: ಜನರಿಗೆ ಎಂಎಲ್ಎ ಬಗ್ಗೆ ಒಲವು, ಆದರೆ ಜಾತಿ ಅಂಶವು ಲೆಕ್ಕಾಚಾರ ಬದಲಿಸಬಹುದು!

ಬ್ಯಾಟರಾನಪುರ ಕ್ಷೇತ್ರದಲ್ಲಿ ಒಕ್ಕಲಿಗ ಮತ್ತು ಹಿಂದುಳಿದ ವರ್ಗದರೇ ಅಧಿಕ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಈ ಕ್ಷೇತ್ರದಿಂದ ಸ್ಪರ್ಧಿಸಿರುವ ಮೂವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಪ್ರಬಲ ಪೈಪೋಟಿ ಉಂಟಾಗಿದೆ

ಬೆಂಗಳೂರು: ಬ್ಯಾಟರಾನಪುರ ಬೆಂಗಳೂರು ಉತ್ತರದಲ್ಲಿ ಅತಿ ದೊಡ್ಡ ವಿಧಾನಸಭಾ ಕ್ಷೇತ್ರವಾಗಿದ್ದು, ಒಕ್ಕಲಿಗ ಮತ್ತು ಹಿಂದುಳಿದ ವರ್ಗದರೇ ಅಧಿಕ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಇದು ಏಳು ಬಿಬಿಎಂಪಿ ವಾರ್ಡ್ ಗಳನ್ನೊಳಗೊಂಡಿದ್ದು, ನಾಲ್ವರು ಕಾಂಗ್ರೆಸ್ ಕಾರ್ಪೋರೇಟರ್ ಗಳಿದ್ದರೆ, ಮೂವರು ಬಿಜೆಪಿಯನ್ನು ಪ್ರತಿನಿಧಿಸುತ್ತಿದ್ದಾರೆ. ಕೃಷಿ ಸಚಿವ ಕೃಷ್ಣ ಬೈರೇಗೌಡ ಮೂರನೇ ಬಾರಿಗೆ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

 ಬಿ ಪ್ಯಾಕ್ ಸರ್ವೇ ಪ್ರಕಾರ  ಕ್ಷೇತ್ರದಲ್ಲಿ ಶೇ.80 ರಷ್ಟು ಅಭಿವೃದ್ದಿ ಕಾಮಗಾರಿಗಳು ಪೂರ್ಣಗೊಂಡಿದ್ದು, ಇದು ಕೃಷ್ಣ ಬೈರೇಗೌಡರಿಗೆ ವರವಾಗುವ ಸಾಧ್ಯತೆಯಿದೆ. ಆದಾಗ್ಯೂ, ಕೆಲ ಬಡಾವಣೆಗಳಲ್ಲಿ ರಸ್ತೆ , ಒಳಚರಂಡಿ ಸರಿಯಾಗಿಲ್ಲ  ಕುಡಿಯುವ ನೀರಿನ ಸಮಸ್ಯೆಯೂ ಕಾಡುತ್ತಿದೆ.  ಕ್ಷೇತ್ರದಲ್ಲಿನ ಜನರು ಕುಡಿಯುವ ನೀರಿಗಾಗಿ ಹೆಚ್ಚಾಗಿ ಬೋರ್ ವೆಲ್ ಹಾಗೂ ಟ್ಯಾಂಕರ್ ಗಳನ್ನು  ಅವಲಂಬಿಸಿದ್ದಾರೆ.

ಈ ಕ್ಷೇತ್ರದಿಂದ ಸ್ಪರ್ಧಿಸಿರುವ ಮೂವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗೀ ಪ್ರಬಲ ಪೈಪೋಟಿ ಉಂಟಾಗಿದ್ದು, ಮತ ವಿಭಜನೆಯಾಗುವ ಸಾಧ್ಯತೆ ಇದೆ.

ಬಿಜೆಪಿ ಅಭ್ಯರ್ಥಿ ರವಿ ಕೆಲ ವರ್ಷಗಳಿಂದ ನಾಪತ್ತೆಯಾಗಿದ್ದರು. ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಆದರೆ, ಜನರು ಅವರ ಮುಖವನ್ನೇ ನೋಡಿಲ್ಲ , ಜೆಡಿಎಸ್   ಅಭ್ಯರ್ಥಿ ಚಂದ್ರಣ್ಣ, ಮೊದಲ ಬಾರಿಗೆ ಅದೃಷ್ಟ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಥಳೀಯರು ಹೇಳುತ್ತಾರೆ.

ಕೃಷ್ಣಬೈರೇಗೌಡ ಮಾಡಿರುವ ಕೆಲಸದ ಬಗ್ಗೆ ತೃಪ್ತಿಯಿದೆ. ಅವರು ಸುಲಭವಾಗಿ ಜನರ ಕೈಗೆ ಸಿಕ್ಕುತ್ತಾರೆ. ಅನೇಕ ನಾಗರಿಕ  ಪರ ಚಟುವಟಿಕೆಗಳನ್ನು ತೊಡಗಿಸಿಕೊಂಡಿದ್ದು, ಹಲವು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ ಎಂದು ಕಾಫಿ ಬೋರ್ಡ್ ಲೇಔಟ್  ನಿವಾಸಿಗಳ ಕಲ್ಯಾಣ ಅಸೋಸಿಯೇಷನ್  ಪ್ರತಿನಿಧಿ  ಹರಿ ಕಣ್ಣಯ್ಯ ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT