ಸಾಂದರ್ಭಿಕ ಚಿತ್ರ 
ರಾಜಕೀಯ

ಮತದಾನೋತ್ತರ ಸಮೀಕ್ಷೆ: ಅತಂತ್ರ ವಿಧಾನಸಭೆ; ಕಾಂಗ್ರೆಸ್ - ಬಿಜೆಪಿ ನಡುವೆ ನೇರ ಹಣಾಹಣಿ

ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಶನಿವಾರ ಒಂದೇ ಹಂತದಲ್ಲಿ....

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಶನಿವಾರ ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಮೇ 15ರಂದು ಫ‌ಲಿತಾಂಶ ಪ್ರಕಟವಾಗಲಿದೆ.
ಮತದಾನ ಮುಕ್ತಾಯವಾದ ಬೆನ್ನಲ್ಲೇ ವಿವಿಧ ಮಾಧ್ಯಮಗಳು ನಡೆಸಿದ ಮತದಾನೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಮತದಾರ ಈ ಬಾರಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡದೇ ಅತಂತ್ರ ಸ್ಥಿತಿ ನಿರ್ಮಾಣ ಮಾಡಿದ್ದಾನೆ.
ಇಂಡಿಯಾ ಟುಡೇ ಗ್ರೂಪ್, ಆಕ್ಸಿಸ್ ಮೈ ಇಂಡಿಯಾ ನಡೆಸಿದ ಮತದಾನ ಪೂರ್ವ ಸಮೀಕ್ಷೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 224 ಕ್ಷೇತ್ರಗಳ ಪೈಕಿ 106 ರಿಂದ 118 ಸ್ಥಾನಗಳನ್ನು ಪಡೆಯುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. 
ಪ್ರಮುಖ ಪ್ರತಿಪಕ್ಷ ಬಿಜೆಪಿ 79ರಿಂದ 92 ಸ್ಥಾನಗಳನ್ನು ಪಡೆಯಲಿದ್ದು, ಜೆಡಿಎಸ್ 22ರಿಂದ 30 ಸ್ಥಾನಗಳನ್ನು ಪಡೆಯಲಿದೆ.
ಇನ್ನು ನ್ಯೂಸ್ ಎಕ್ಸ್ ಎಕ್ಸಿಟ್ ಪೋಲ್ ಪ್ರಕಾರ, ಕಾಂಗ್ರೆಸ್ 72-78, ಬಿಜೆಪಿ 102-110, ಜೆಡಿಎಸ್ 35-39, ಇತರೆ 3-5 ಸ್ಥಾನ ಪಡೆಯಲಿದೆ.
ಪೀಪಲ್ಸ್ ಪಲ್ಸ್ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 93ರಿಂದ 103, ಬಿಜೆಪಿ 83ರಿಂದ 93 ಹಾಗೂ ಜೆಡಿಎಸ್ 33ರಿಂದ 43 ಸ್ಥಾನಗಳನ್ನು ಪಡೆಯುವ ಮೂಲಕ ಕಿಂಗ್ ಮೇಕರ್ ಆಗಲಿದೆ.

ರಿಪಬ್ಲಿಕ್ ಟಿವಿ ಜನ್ ಕೀ ಬಾತ್ ಸಮೀಕ್ಷೆಯಲ್ಲಿ ಕಾಂಗ್ರೆಸ್ 73-82, ಬಿಜೆಪಿ 95 -114, ಜೆಡಿಎಸ್ 32-43 ಹಾಗೂ ಇತರು 02-03 ಸ್ಥಾನಗಳನ್ನು ಪಡೆಯಲಿದ್ದಾರೆ.

ಇಂಡಿಯಾ ಟಿವಿ - ವಿಎಂಆರ್ ಎಕ್ಸಿಟ್ ಪೋಲ್ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 97, ಬಿಜೆಪಿ 87 ಹಾಗೂ ಜೆಡಿಎಸ್ 35 ಸ್ಥಾನಗಳನ್ನು ಪಡೆಯಲಿದೆ.

ಕಾಂಗ್ರೆಸ್ 90ರಿಂದ 103 ಸ್ಥಾನ, ಬಿಜೆಪಿ 82ರಿಂದ 93, ಜೆಡಿಎಸ್ 31ರಿಂದ 39 ಸ್ಥಾನ ಪಡೆದರೆ ಇತರರು 2ರಿಂದ 4 ಸ್ಥಾನ ಪಡೆಯಲಿದ್ದಾರೆ ಎಂದು ಟೈಮ್ಸ್ ನೌ- ವಿಎಂಆರ್ ಸಮೀಕ್ಷೆ ತಿಳಿಸಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನ ಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು ಸರಳ ಬಹುಮತಕ್ಕಾಗಿ ಯಾವುದೇ ಒಂದು ಪಕ್ಷ 113 ಸ್ಥಾನಗಳನ್ನು ಗೆಲ್ಲಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!