ಡಾ.ಯತೀಂದ್ರ 
ರಾಜಕೀಯ

ಕಾಂಗ್ರೆಸ್ ಬಗ್ಗೆ ವರುಣಾ ಜನತೆಗೆ ತೃಪ್ತಿ ಇದೆ: ಸಿಎಂ ಪುತ್ರ ಡಾ. ಯತೀಂದ್ರ

ಕಾಂಗ್ರೆಸ್ ಸರ್ಕಾರ ಮತ್ತು ಅದರ ಅಭಿವೃದ್ಧಿ ಕಾರ್ಯಗಳ ಬಗ್ಗೆ ವರುಣಾ ಕ್ಷೇತ್ರದ ಜನತೆಗೆ ತೃಪ್ತಿ ಇದೆ ಎಂದು...

ಮೈಸೂರು: ಕಾಂಗ್ರೆಸ್ ಸರ್ಕಾರ ಮತ್ತು ಅದರ ಅಭಿವೃದ್ಧಿ ಕಾರ್ಯಗಳ ಬಗ್ಗೆ ವರುಣಾ ಕ್ಷೇತ್ರದ ಜನತೆಗೆ ತೃಪ್ತಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವರುಣಾ ಕಾಂಗ್ರೆಸ್ ಅಭ್ಯರ್ಥಿ ಡಾ.ಯತೀಂದ್ರ ಅವರು ಶನಿವಾರ ಹೇಳಿದ್ದಾರೆ.
ನಾನು ಕಳೆದ ಒಂದೂವರೆ ವರ್ಷದಿಂದ ವರುಣಾ ಕ್ಷೇತ್ರದ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದೇನೆ. ಚುನಾವಣೆ ಪ್ರಚಾರದ ವೇಳೆ ನನಗೆ ಅಂತಹ ಬದಲಾವಣೆ ಏನು ಕಾಣಿಸಲಿಲ್ಲ ಎಂದಿದ್ದಾರೆ.
ನಾನು ಕ್ಷೇತ್ರದ ಯಾವ ಹಳ್ಳಿಗೆ ಭೇಟಿ ನೀಡಿದರೂ ಜನರು ಕಾಂಗ್ರೆಸ್ ಸರ್ಕಾರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಪುತ್ರ ಎಎನ್ಐಗೆ ತಿಳಿಸಿದ್ದಾರೆ.
ಇಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 120 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ನಮ್ಮ ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ತಳಮಟ್ಟದ ವರದಿ ಮತ್ತು ಸಮೀಕ್ಷೆಯನ್ನು ಆಧರಿಸಿ ಹೇಳಿದ್ದಾರೆ. ಅಲ್ಲದೆ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು, ಜನರ ನಾಡಿ ಮಿಡಿತ ಅರಿತಿದ್ದಾರೆ ಎಂದರು.
ವರುಣಾ ಕ್ಷೇತ್ರದಲ್ಲಿ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪತ್ರ ಬಿವೈ ವಿಜಯೇಂದ್ರ ನಡುವೆ ನೇರ ಹಣಾಹಣಿ ನಡೆಯಬೇಕಿತ್ತು. ಆದರೆ ಅಂತಿಮ ಕ್ಷಣದಲ್ಲಿ ಬಿಜೆಪಿ ಬಸವರಾಜು ಅವರಿಗೆ ಟಿಕೆಟ್ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವಾಸವೇ ಜಗತ್ತಿನ ಅತಿದೊಡ್ಡ ಸಂಪತ್ತು, ‘ನಾವಿಕರ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ’: G7 ಶೃಂಗಸಭೆಯಲ್ಲಿ ಟ್ರಂಪ್ ಎದುರೇ ಪ್ರಧಾನಿ ಮೋದಿ ಖಡಕ್ ಸಂದೇಶ..!

ಜಿ 7 ಸಭೆ: ಸಂಬಂಧಗಳಲ್ಲಿನ ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಪರಸ್ಪರ ಶುಭಾಶಯ ವಿನಿಮಯ; ಜೂ.17 ರಂದು ದ್ವಿಪಕ್ಷೀಯ ಸಭೆ

'ನಾನಿಲ್ಲದಿದ್ದರೆ ಇಸ್ರೇಲ್ ಇರುತ್ತಿರಲಿಲ್ಲ': ನೆತನ್ಯಾಹು ವಿರುದ್ಧ ಟ್ರಂಪ್ ಅಸಮಾಧಾನ; 'ಅವರಿಗೆ' ಸಾಧ್ಯವಾಗದಿದ್ದರೆ ಹಿಜ್ಬೊಲ್ಲಾನ ಸಿರಿಯಾ ನೋಡಿಕೊಳ್ಳುತ್ತೆ; Video

ಸಿಎಂ ಡಿಕೆ ಶಿವಕುಮಾರ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಬಿ.ಎಸ್. ಶ್ರೀಧರ್ ನೇಮಕ

'ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆ ಹಲವು ವರ್ಷಗಳಷ್ಟು ಮುಂದಿದೆ': ಸ್ಲೋವೇನಿಯಾದ ಪ್ರವಾಸಿ ಮಹಿಳೆ ಮೆಚ್ಚುಗೆ

SCROLL FOR NEXT