ಡಾ.ಯತೀಂದ್ರ 
ರಾಜಕೀಯ

ಕಾಂಗ್ರೆಸ್ ಬಗ್ಗೆ ವರುಣಾ ಜನತೆಗೆ ತೃಪ್ತಿ ಇದೆ: ಸಿಎಂ ಪುತ್ರ ಡಾ. ಯತೀಂದ್ರ

ಕಾಂಗ್ರೆಸ್ ಸರ್ಕಾರ ಮತ್ತು ಅದರ ಅಭಿವೃದ್ಧಿ ಕಾರ್ಯಗಳ ಬಗ್ಗೆ ವರುಣಾ ಕ್ಷೇತ್ರದ ಜನತೆಗೆ ತೃಪ್ತಿ ಇದೆ ಎಂದು...

ಮೈಸೂರು: ಕಾಂಗ್ರೆಸ್ ಸರ್ಕಾರ ಮತ್ತು ಅದರ ಅಭಿವೃದ್ಧಿ ಕಾರ್ಯಗಳ ಬಗ್ಗೆ ವರುಣಾ ಕ್ಷೇತ್ರದ ಜನತೆಗೆ ತೃಪ್ತಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವರುಣಾ ಕಾಂಗ್ರೆಸ್ ಅಭ್ಯರ್ಥಿ ಡಾ.ಯತೀಂದ್ರ ಅವರು ಶನಿವಾರ ಹೇಳಿದ್ದಾರೆ.
ನಾನು ಕಳೆದ ಒಂದೂವರೆ ವರ್ಷದಿಂದ ವರುಣಾ ಕ್ಷೇತ್ರದ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದೇನೆ. ಚುನಾವಣೆ ಪ್ರಚಾರದ ವೇಳೆ ನನಗೆ ಅಂತಹ ಬದಲಾವಣೆ ಏನು ಕಾಣಿಸಲಿಲ್ಲ ಎಂದಿದ್ದಾರೆ.
ನಾನು ಕ್ಷೇತ್ರದ ಯಾವ ಹಳ್ಳಿಗೆ ಭೇಟಿ ನೀಡಿದರೂ ಜನರು ಕಾಂಗ್ರೆಸ್ ಸರ್ಕಾರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಪುತ್ರ ಎಎನ್ಐಗೆ ತಿಳಿಸಿದ್ದಾರೆ.
ಇಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 120 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ನಮ್ಮ ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ತಳಮಟ್ಟದ ವರದಿ ಮತ್ತು ಸಮೀಕ್ಷೆಯನ್ನು ಆಧರಿಸಿ ಹೇಳಿದ್ದಾರೆ. ಅಲ್ಲದೆ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು, ಜನರ ನಾಡಿ ಮಿಡಿತ ಅರಿತಿದ್ದಾರೆ ಎಂದರು.
ವರುಣಾ ಕ್ಷೇತ್ರದಲ್ಲಿ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪತ್ರ ಬಿವೈ ವಿಜಯೇಂದ್ರ ನಡುವೆ ನೇರ ಹಣಾಹಣಿ ನಡೆಯಬೇಕಿತ್ತು. ಆದರೆ ಅಂತಿಮ ಕ್ಷಣದಲ್ಲಿ ಬಿಜೆಪಿ ಬಸವರಾಜು ಅವರಿಗೆ ಟಿಕೆಟ್ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 20 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ'; ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು: ನಿರ್ಮಲಾ ಸೀತಾರಾಮನ್ ವಾಗ್ದಾಳಿ