ಸಾಂದರ್ಭಿಕ ಚಿತ್ರ 
ರಾಜಕೀಯ

ಇವಿಎಂ ಯಂತ್ರ ಅಸಮರ್ಪಕ: ಹೆಬ್ಬಾಳ ಬೂತ್ ನಲ್ಲಿ ಸೋಮವಾರ ಮರು ಮತದಾನ

ಇವಿಎಂ ಯಂತ್ರಗಳ ಅಸಮರ್ಪಕ ಕ್ರಿಯೆಯಿಂದಾಗಿ ಹೆಬ್ಬಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯ ಆರ್‌.ಎಂ.ವಿ ಎರಡನೇ ಹಂತದ ಗಾಂಧಿ ವಿದ್ಯಾಲಯ ಕನ್ನಡ ಮತ್ತು ...

ಬೆಂಗಳೂರು: ಇವಿಎಂ ಯಂತ್ರಗಳ ಅಸಮರ್ಪಕ ಕ್ರಿಯೆಯಿಂದಾಗಿ ಹೆಬ್ಬಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯ ಆರ್‌.ಎಂ.ವಿ ಎರಡನೇ ಹಂತದ ಗಾಂಧಿ ವಿದ್ಯಾಲಯ ಕನ್ನಡ ಮತ್ತು ತಮಿಳು ಪ್ರಾಥಮಿಕ ಶಾಲೆಯ ಮರುಮತದಾನ ಸೋಮವಾರ ನಡೆಯಲಿದೆ.
ಮತಯಂತ್ರದಲ್ಲಿ ನಿರ್ದಿಷ್ಟ ಅಭ್ಯರ್ಥಿಯ ಹೆಸರಿನ ಮುಂದಿನ ಚಿಹ್ನೆಯ ಮುಂದಿನ ಗುಂಡಿ ಒತ್ತಿದರೆ, ಅದು ಬೇರೆ ಅಭ್ಯರ್ಥಿಗೆ ಚಲಾವಣೆಯಾಗುತ್ತಿತ್ತು. ವಿವಿಪ್ಯಾಟ್‌ನಲ್ಲೂ ಬೇರೆ ಅಭ್ಯರ್ಥಿಯ ಚಿಹ್ನೆ ಕಾಣಿಸಿಕೊಳ್ಳುತ್ತಿತ್ತು. ಅನೇಕ ಮತದಾರರು ಈ ಬಗ್ಗೆ ದೂರಿದ್ದರು.
ಮತಯಂತ್ರದ ಗುಂಡಿ ಒತ್ತಿದಾಗ ವಿವಿಪ್ಯಾಟ್‌ನಲ್ಲಿ ಅವರು ಮತ ಹಾಕಿದ ಅಭ್ಯರ್ಥಿ ಬದಲು ಬೇರೆ ಪಕ್ಷದ ಚಿಹ್ನೆ ಕಾಣಿಸಿಕೊಂಡಿತು.‘ನಾವು ಗುಂಡಿ ಒತ್ತಿದ ಅಭ್ಯರ್ಥಿಗೆ ಮತ ಚಲಾವಣೆ ಆಗಿಲ್ಲ’ ಎಂದು  ಕೆಲ  ಮತದಾರರು ಆಕ್ಷೇಪ ವ್ಯಕ್ತಪಡಿಸಿದರು. ಆಗ ಮತಗಟ್ಟೆ ಅಧಿಕಾರಿಗಳು, ‘ನಿಮಗೆ ಇನ್ನೊಮ್ಮೆ ಮತ ಹಾಕಲು ಅವಕಾಶ ಕೊಡಲಾಗುತ್ತದೆ. ಆದರೆ, ನೀವು ಯಾರಿಗೆ ಮತ ಹಾಕುತ್ತೀರಿ ಎಂದು ಹೇಳಿ, 'ನಮ್ಮ ಸಮ್ಮುಖದಲ್ಲೇ ಗುಂಡಿ ಒತ್ತಬೇಕು. ಒಂದು ವೇಳೆ ನೀವು ಹಾಕಿದ ಅಭ್ಯರ್ಥಿಯ ಚಿಹ್ನೆಯೇ ವಿವಿಪ್ಯಾಟ್‌ನಲ್ಲಿ ಕಾಣಿಸಿಕೊಂಡರೆ ನೀವು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು. ಈ ಸವಾಲು ಸ್ವೀಕರಿಸಲು ಅವರು ಒಪ್ಪಿದ್ದರು. ಅವರು ಎರಡನೇ ಬಾರಿಗೆ ಹಾಕಿದ ಮತವೂ ಬೇರೊಬ್ಬ ಅಭ್ಯರ್ಥಿಗೆ ಚಲಾವಣೆಯಾಗಿತ್ತು.
ಆ ಬಳಿಕ ಮತಗಟ್ಟೆ ಅಧಿಕಾರಿಗಳೇ ಖುದ್ದಾಗಿ ಪರಿಶೀಲಿಸಿದಾಗ ಮತಯಂತ್ರದಲ್ಲಿ ಲೋಪವಿದ್ದುದು ಖಚಿತವಾಯಿತು. ಅಷ್ಟರಲ್ಲಾಗಲೇ 49 ಮತಗಳು ಚಲಾವಣೆಯಾಗಿದ್ದವು. ಬಳಿಕ ಬಿಇಎಲ್‌ ತಂತ್ರಜ್ಞರನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲಿಸಿದಾಗಲೂ ಮತಯಂತ್ರದಲ್ಲಿ ಲೋಪವಿರುವುದು ಕಂಡು ಬಂತು. ಬಳಿಕ ಮತದಾನ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಹಕ್ಕು ಚಲಾವಣೆಗಾಗಿ ಮತಗಟ್ಟೆಗೆ ಬಂದವರಿಗೆ ‘ಇಲ್ಲಿನ ಮತ ಯಂತ್ರ ಕೆಟ್ಟು ಹೋಗಿದೆ’ ಎಂದು ಅಧಿಕಾರಿಗಳು ಹಿಂದಕ್ಕೆ ಕಳುಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT