ಮುನಿರತ್ನ 
ರಾಜಕೀಯ

ಬಂಧನ ಭೀತಿ: ತಲೆಮರೆಸಿಕೊಂಡ ಶಾಸಕ ಮುನಿರತ್ನ?

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್​ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್​ ಅಭ್ಯರ್ಥಿ ಮುನಿರತ್ನ ವಿರುದ್ಧ...

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್​ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್​ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು ಬಂಧನ ಭೀತಿ ಎದುರಿಸುತ್ತಿರುವ ಮುನಿರತ್ನ ಅವರು ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ. 
ಇದೀಗ ಮುನಿರತ್ನ ಅವರು ತಲೆಮರೆಸಿಕೊಂಡಿದ್ದು ಯಾರಾ ಕರೆಗೆ ಸಿಗುತ್ತಿಲ್ಲ. ಮನೆಯಲ್ಲಿಯೂ ಇಲ್ಲ ಎಂದು ಹೇಳಲಾಗಿದೆ. ಈ ಮಧ್ಯೆ ಬಂಧನ ಭೀತಿಯಲ್ಲಿರುವ ಮುನಿರತ್ನ ಅವರು ತೆರೆಮರೆಯಲ್ಲಿ ಜಾಮೀನಿಗಾಗಿ ಹೊಡಾಡುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 
ಮುನಿರತ್ನ ಸೇರಿ ಎಲ್ಲ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 420, 468, 471ರಡಿ ಪ್ರಕರಣ ದಾಖಲಿಸುವಂತೆ ನಗರದ  24ನೇ ಎಸಿಎಂಎಂ ಕೋರ್ಟ್ ನಲ್ಲಿ ಜಾಲಹಳ್ಳಿ ಪೊಲೀಸರಿಗೆ​ ಆದೇಶಿಸಿತ್ತು. 
ಗುರುತಿನ ಚೀಟಿ ಯನ್ನು ರೇಡ್ ಮಾಡಲು ಹೋಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಲಾಗಿದೆ. ರಾಕೇಶ್ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT