ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಬಂಧನ ಭೀತಿ ಎದುರಿಸುತ್ತಿರುವ ಮುನಿರತ್ನ ಅವರು ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದೀಗ ಮುನಿರತ್ನ ಅವರು ತಲೆಮರೆಸಿಕೊಂಡಿದ್ದು ಯಾರಾ ಕರೆಗೆ ಸಿಗುತ್ತಿಲ್ಲ. ಮನೆಯಲ್ಲಿಯೂ ಇಲ್ಲ ಎಂದು ಹೇಳಲಾಗಿದೆ. ಈ ಮಧ್ಯೆ ಬಂಧನ ಭೀತಿಯಲ್ಲಿರುವ ಮುನಿರತ್ನ ಅವರು ತೆರೆಮರೆಯಲ್ಲಿ ಜಾಮೀನಿಗಾಗಿ ಹೊಡಾಡುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮುನಿರತ್ನ ಸೇರಿ ಎಲ್ಲ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 420, 468, 471ರಡಿ ಪ್ರಕರಣ ದಾಖಲಿಸುವಂತೆ ನಗರದ 24ನೇ ಎಸಿಎಂಎಂ ಕೋರ್ಟ್ ನಲ್ಲಿ ಜಾಲಹಳ್ಳಿ ಪೊಲೀಸರಿಗೆ ಆದೇಶಿಸಿತ್ತು.
ಗುರುತಿನ ಚೀಟಿ ಯನ್ನು ರೇಡ್ ಮಾಡಲು ಹೋಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಲಾಗಿದೆ. ರಾಕೇಶ್ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos