ಸಾಂದರ್ಭಿಕ ಚಿತ್ರ 
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಫಲಿತಾಂಶಕ್ಕಾಗಿ ಕೌಂಟ್ ಡೌನ್ ಶುರು!

2019ರ ಲೋಕಸಭೆ ಚುನಾವಣೆಯ ಸೆಮಿ ಫೈನಲ್ ಎಂದೇ ಪರಿಗಣಿಸಲಾಗಿರುವ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕಾಗಿ ಕೌಂಟ್ ಡೌನ್ ಆರಂಭವಾಗಿದ್ದು, ನಾಳಿನ ಮತಎಣಿಕೆಯತ್ತ ಎಲ್ಲರ ಕಣ್ಣು ನೆಟ್ಟಿದೆ.

ಬೆಂಗಳೂರು : 2019ರ ಲೋಕಸಭೆ ಚುನಾವಣೆಯ ಸೆಮಿ ಫೈನಲ್ ಎಂದೇ ಪರಿಗಣಿಸಲಾಗಿರುವ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕಾಗಿ ಕೌಂಟ್ ಡೌನ್ ಆರಂಭವಾಗಿದ್ದು, ನಾಳಿನ ಮತಎಣಿಕೆಯತ್ತ  ಎಲ್ಲರ ಕಣ್ಣು ನೆಟ್ಟಿದೆ.

ಪ್ರಮುಖ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದ್ದು, ಯಾರು ಗೆಲ್ಲುತ್ತಾರೆ , ಯಾರು ಸೋಲ್ತಾರೆ ಎಂಬ ಕುತೂಹಲ ಇಡೀ ದೇಶಾದ್ಯಂತ ಮನೆ ಮಾಡಿದೆ.

224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ  ರಾಜ್ಯಾದ್ಯಂತ ಸ್ಥಾಪಿಸಲಾಗಿದ್ದ 58, 546 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಬೆಂಗಳೂರಿನ ಜಯನಗರ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಚುನಾವಣೆಯನ್ನು ಮುಂದೂಡಲಾಗಿದೆ.

ಭಾರೀ ಪ್ರಮಾಣದ ಹಣ, ಮದ್ಯ ಹಂಚಿಕೆ ನಡುವೆಯೂ ದಾಖಲೆ ಪ್ರಮಾಣದ ಮತದಾನ ನಡೆದಿದ್ದು,  216 ಮಹಿಳೆಯರು  ಸೇರಿದಂತೆ 2654 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಈ ಚುನಾವಣೆಯನ್ನು  2019 ರ ಲೋಕಸಭಾ ಚುನಾವಣೆಯ ಗೇಮ್ ಚೆಂಜರ್ ಎಂದು ಕಾಂಗ್ರೆಸ್ ನೋಡುತ್ತಿದ್ದರೆ, ದಕ್ಷಿಣ ಭಾರತದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಹವಣಿಸುತ್ತಿದೆ.

224 ವಿಧಾನಸಭಾ ಕ್ಷೇತ್ರದ ಕರ್ನಾಟಕದಲ್ಲಿ ಅಧಿಕಾರ ರಚಿಸಲು 113 ಸ್ಥಾನಗಳ ಮ್ಯಾಜಿಕ್ ನಂಬರ್ ಪಡೆಯಲೇಬೇಕಾಗಿದೆ. ಕಳೆದ ಬಾರಿಯ ಚುನಾವಣೆ  ಸಂದರ್ಭದಲ್ಲಿ ಬಿಜೆಪಿಯಿಂದ ಅಧಿಕಾರ ಕಸಿದುಕೊಂಡಿದ್ದ ಕಾಂಗ್ರೆಸ್ ಈ ಬಾರಿಯೂ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ.

 ಮತ್ತೊಂದೆಡೆ ನಾವೇ ಅಧಿಕಾರಕ್ಕೆ ಬರುವುದಾಗಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಆತ್ಮ ವಿಶ್ವಾಸದಲ್ಲಿ ಬೀಗುತ್ತಿದ್ದರೆ. ವಿಶೇಷ ಅಂದರೆ, 1985 ರಿಂದಲೂ ಒಂದು ಬಾರಿ ಅಧಿಕಾರ ಅನುಭವಿಸಿದ್ದ ಸರ್ಕಾರ ಮತ್ತೊಂದು ಅವಧಿಗೂ ಅಧಿಕಾರಕ್ಕೆ ಬಂದ ಉದಾಹರಣೆ ಇಲ್ಲ.

ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವ ಮೂಲಕ ಸರ್ಕಾರ ರಚಿಸಲು ಜೆಡಿಎಸ್ ಕೂಡಾ ಉತ್ಸುಕವಾಗಿದೆ. ಚುನಾವಣೋತ್ತರ ಸಮೀಕ್ಷೆಗಳು ಭಿನ್ನ ವಿಭಿನ್ನ ವರದಿಗಳನ್ನು ನೀಡಿವೆ.

 ಕೆಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಅತಿದೊಡ್ಡ ಪಕ್ಷವಾಗಲಿದೆ ಎಂದು ಹೇಳಿದ್ದರೆ, ಮತ್ತೆ ಕೆಲ ಸಮೀಕ್ಷೆಗಳು ಬಿಜೆಪಿ ಪರವಾಗಿವೆ. ಬಹುತೇಕ ಸಮೀಕ್ಷೆಗಳಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ ಎಂದು ಊಹಿಸಿವೆ.ಒಟ್ಟಾರೇ, ಈ ಎಲ್ಲಾ ಊಹೆಗಳಿಗೆ ನಾಳೆ ತೆರೆ ಬೀಳಲಿದ್ದು, ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT