ರಾಜಕೀಯ

ಸಂಖ್ಯಾಬಲವಿಲ್ಲದೆ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

Lingaraj Badiger
ಬೆಂಗಳೂರು: ಸಂಖ್ಯಾಬಲ ಇಲ್ಲದೆಯೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ.ವೀರಪ್ಪ ಮೊಯ್ಲಿ ಅವರು ಮಂಗಳವಾರ ಹೇಳಿದ್ದಾರೆ.
ನೂತನ ಸರ್ಕಾರ ರಚಿಸಲು ಕಾಂಗ್ರೆಸ್ ಈಗಾಗಲೇ ಜೆಡಿಎಸ್ ಗೆ ಸಂಪೂರ್ಣ ಬೆಂಬಲ ಘೋಷಿಸಿದೆ. ಜೆಡಿಎಸ್ - ಕಾಂಗ್ರೆಸ್ ಗೆ ಸಾಕಷ್ಟು ಸಂಖ್ಯಾಬಲ ಇದೆ. ಹೀಗಾಗಿ ಎಚ್ ಡಿ ಕುಮಾರಸ್ವಾಮಿ ಅವರು ಸರ್ಕಾರ ರಚಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಜಂಟಿಯಾಗಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸಹ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಬಹುಮತ ಸಾಬೀತುಪಡಿಸಲು ಒಂದು ವಾರ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ಅಂತಿಮವಾಗಿ ರಾಜ್ಯಪಾಲರು ಸರ್ಕಾರ ರಚಿಸಲು ಯಾರಿಗೆ ಆಹ್ವಾನಿ ನೀಡುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.
SCROLL FOR NEXT