ರಾಜಕೀಯ

ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆ!

Shilpa D
ಮೈಸೂರು: ದೀಪದ ಕೆಳಗೆ ಕತ್ತಲು ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ  ಕಾಂಗ್ರೆಸ್‌ ಭಾರಿ ಹಿನ್ನಡೆ ಅನುಭವಿಸಿದೆ.
ಸಿದ್ದರಾಮಯ್ಯ ಸೇರಿದಂತೆ ಬಹುತೇಕರು ಭಾರಿ ಅಂತರದಿಂದ ಹಿಂದೆ ಬಿದ್ದಿದ್ದಾರೆ. ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ.ಟಿ ದೇವೇಗೌಡ ವಿರುದ್ಧ ಸಿದ್ದರಾಮಯ್ಯ ಸೋಲನುಭವಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಜಿ.ಟಿ ದೇವೇಗೌಡ ವಿರುದ್ಧ 18 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಗೆಲುವು ಸಾಧಿಸಿದ್ದಾರೆ. ಕೆ.ಆರ್ ಕ್ಷೇತ್ರದಲ್ಲಿ ಬಿಜೆಪಿಯ ರಾಮದಾಸ್ ಜಯಗಳಿಸಿದ್ದಾರೆ. ನರಸಿಂಹ ರಾಜ ಕ್ಷೇತ್ರದಲ್ಲಿ ತನ್ವೀರ್ ಸೇಠ್ ಜಯಗಳಿಸಿದ್ದಾರೆ. 
ಹುಣಸೂರಿನಲ್ಲಿ ಜೆಡಿಎಸ್ ನ ಎಚ್ ವಿಶ್ವನಾಥ್ ಗೆಲುವು ಸಾಧಿಸಿದ್ದಾರೆ.
SCROLL FOR NEXT