ಸಂಗ್ರಹ ಚಿತ್ರ 
ರಾಜಕೀಯ

ಮೈತ್ರಿಗೆ ಮುಂದುವರೆದ ಭಾರೀ ಕಸರತ್ತು: ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಗೆ ಹಲವು ಶಾಸಕರು ಗೈರು

ಜೆಡಿಎಸ್ ಜೊತೆ ಮಾಡಿಕೊಂಡಾದರೂ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ಭಾರೀ ಕಸರತ್ತು ನಡೆಸುತ್ತಿರುವ ನಡುವಲ್ಲೇ, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲ ಶಾಸಕರು ನಾಪತ್ತೆಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ...

ಬೆಂಗಳೂರು; ಜೆಡಿಎಸ್ ಜೊತೆ ಮಾಡಿಕೊಂಡಾದರೂ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ಭಾರೀ ಕಸರತ್ತು ನಡೆಸುತ್ತಿರುವ ನಡುವಲ್ಲೇ, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲ ಶಾಸಕರು ನಾಪತ್ತೆಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 
ಶಾಸಕಾಂಗ ಸಭೆಗೆ 78 ಶಾಸಕರ ಪೈಕಿ ಕೇವಲ 66 ಶಾಸಕರು ಮಾತ್ರ ಆಗಮಿಸಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಮುಖದಲ್ಲಿ ಆತಂಕ ಮನೆ ಮಾಡಿದೆ. 
ಸಭೆಗೆ ಈಗಾಗಲೇ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬೀದರ್ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಈಶ್ವರ್ ಖಂಡ್ರೆ ಹಾಗೂ ಇತರೆ ಕಾಂಗ್ರೆಸ್ ಶಾಸಕರು ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿಗೆ ತೆರಳಿದ್ದಾರೆ. 
ಮತ್ತೊಂದೆಡೆ ಕಾಂಗ್ರೆಸ್ ಶಾಸಕರಾದ ಅಮರೇಗೌಡ ನಾಯಕ ಹಾಗೂ ಭೀಮನಾಯ್ಕ್ ಅವರು ನಾಪತ್ತೆಯಾಗಿದ್ದು, ಸಂಪರ್ಕಿಸಲು ಎಷ್ಟೇ ಪ್ರಯತ್ನ ನಡೆಸಿದರೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಇದರಂತೆ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿರುವ ಶಾಸಗ ನಾಗೇಂದ್ರ ಹಾಗೂ ಆನಂದ್ ಸಿಂಗ್ ಅವರೂ ಕೂಡ ಕಾಂಗ್ರೆಸ್'ಗೆ ಕೈ ಕೊಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. 

ಈ ನಡುವೆ ಜೆಡಿಎಸ್ ಇಬ್ಬರು ಶಾಸಕರಾದ ರಾಜಾ ವೆಂಕಟಪ್ಪನಾಯಕ ಮತ್ತು ವೆಂಕಟ ರಾವ್ ನಾಡಗೌಡ ಅವರೂ ನಾಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷ ಸಭೆ ನಡೆಯುತ್ತಿದ್ದು, ಸಭೆಗೆ ಇಬ್ಬರೂ ನಾಯಕರೂ ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT